25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

ಸೋಣಂದೂರು: ಪಣಕಜೆಯ ಅರ್ಕಜೆ ಎಂಬಲ್ಲಿ ಶ್ರೀಮತಿ ಕುಸುಮಾವತಿ ಎಂಬುವವರ ಮನೆಗೆ ಗುಡ್ಡ ಕುಸಿದು ಮನೆಯ ಮುಂಭಾಗ ಮಣ್ಣಿನಿಂದ ಸಂಪೂರ್ಣ ಮುಚ್ಚಿ ಹೋಗಿತ್ತು.

ವಿಷಯ ತಿಳಿದು ತಕ್ಷಣ ಸ್ಪಂದಿಸಿದ ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರು ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡು ಸಹಕರಿಸಿದರು.

ದೊಡ್ಡ ಮಟ್ಟದ ಮಣ್ಣು ಕುಸಿದು ಭಾರೀ ಪ್ರಮಾಣದ ಮಣ್ಣು ತುಂಬಿದ್ದು, ಸಂಪೂರ್ಣ ತೆರವು ಅಸಾಧ್ಯ ವಾಗಿರುತ್ತದೆ. ತಾತ್ಕಾಲಿಕವಾಗಿ ಮುಂಭಾಗದ ಮಣ್ಣು ತೆರವುಗೊಳಿಸಲಾಯಿತು.

ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೇವಾಪ್ರತಿನಿಧಿ ಶ್ರೀಮತಿ ಜಾನಕಿ, ಮಡಂತ್ಯಾರು ವಲಯ ಶೌರ್ಯ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ, ಘಟಕ ಪ್ರತಿನಿಧಿ ಬಾಲಕೃಷ್ಣ ಹಾರಬೆ,ಸ್ವಯಂ ಸೇವಕರಾದ ಭರತ್ ಕುಮಾರ್, ದಯಾನಂದ ಹಚ್ಚಬೆ, ಯೋಗೀಶ್ ಕೊಡ್ಲಕ್ಕೆ, ಶ್ರೀಮತಿ ಶೋಭಾ, ಬೇಬಿ ವಡ್ಡ, ಸತೀಶ್ ಆಚಾರ್ಯ ಕಾರ್ಯಾಚರಣೆಯಲ್ಲಿ ಸಹಕರಿಸಿದರು.

Related posts

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya

ಅಡಿಕೆಯೊಂದಿಗೆ ಕಾಳುಮೆಣಸು ಮತ್ತು ಜಾಯಿಕಾಯಿ ಬೆಳೆಯುವ ರೈತರಿಗೆ ಸುವರ್ಣವಕಾಶ

Suddi Udaya

ಡಿ.17-19: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಕ್ಷೇತ್ರದ ಷಷ್ಠೀ ಮಹೋತ್ಸವ

Suddi Udaya
error: Content is protected !!