September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

ಸೋಣಂದೂರು: ಪಣಕಜೆಯ ಅರ್ಕಜೆ ಎಂಬಲ್ಲಿ ಶ್ರೀಮತಿ ಕುಸುಮಾವತಿ ಎಂಬುವವರ ಮನೆಗೆ ಗುಡ್ಡ ಕುಸಿದು ಮನೆಯ ಮುಂಭಾಗ ಮಣ್ಣಿನಿಂದ ಸಂಪೂರ್ಣ ಮುಚ್ಚಿ ಹೋಗಿತ್ತು.

ವಿಷಯ ತಿಳಿದು ತಕ್ಷಣ ಸ್ಪಂದಿಸಿದ ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರು ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡು ಸಹಕರಿಸಿದರು.

ದೊಡ್ಡ ಮಟ್ಟದ ಮಣ್ಣು ಕುಸಿದು ಭಾರೀ ಪ್ರಮಾಣದ ಮಣ್ಣು ತುಂಬಿದ್ದು, ಸಂಪೂರ್ಣ ತೆರವು ಅಸಾಧ್ಯ ವಾಗಿರುತ್ತದೆ. ತಾತ್ಕಾಲಿಕವಾಗಿ ಮುಂಭಾಗದ ಮಣ್ಣು ತೆರವುಗೊಳಿಸಲಾಯಿತು.

ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೇವಾಪ್ರತಿನಿಧಿ ಶ್ರೀಮತಿ ಜಾನಕಿ, ಮಡಂತ್ಯಾರು ವಲಯ ಶೌರ್ಯ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ, ಘಟಕ ಪ್ರತಿನಿಧಿ ಬಾಲಕೃಷ್ಣ ಹಾರಬೆ,ಸ್ವಯಂ ಸೇವಕರಾದ ಭರತ್ ಕುಮಾರ್, ದಯಾನಂದ ಹಚ್ಚಬೆ, ಯೋಗೀಶ್ ಕೊಡ್ಲಕ್ಕೆ, ಶ್ರೀಮತಿ ಶೋಭಾ, ಬೇಬಿ ವಡ್ಡ, ಸತೀಶ್ ಆಚಾರ್ಯ ಕಾರ್ಯಾಚರಣೆಯಲ್ಲಿ ಸಹಕರಿಸಿದರು.

Related posts

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya
error: Content is protected !!