September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೇಣೂರು ವಲಯದ ಕರಿಮಣೇಲು ಕಾರ್ಯ ಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನೂ ಒಕ್ಕೂಟದ ಅಧ್ಯಕ್ಷ ವಿಲಿಯಂ ವಿನ್ಸೆಂಟ್ ರೇಗೊರವರು ಉದ್ಘಾಟಿಸಿದರು.
ಬೆಳ್ತಂಗಡಿ ಕ್ಷೇತ್ರ ಶಿಕ್ಷಣ ಆರೋಗ್ಯ ಅಧಿಕಾರಿ ಆಮ್ಮಿ ಇವರು ಕೇಂದ್ರದ ಸದಸ್ಯರಿಗೆ ಪೌಷ್ಟಿಕ ಆಹಾರದ ಬಗ್ಗೆ ಹಾಗೂ ಮಹಿಳೆಯರಲ್ಲಿ ಬರುವಂತಹ ಕೆಲವೊಂದು ಸಮಸ್ಯೆ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಜ್ಞಾನ ವಿಕಾಸ ಸಮಣ್ವಯ ಅಧಿಕಾರಿ ಪೂರ್ಣಿಮಾ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕರು ಶಾಲಿನಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಮಾಜಿ ಅಧ್ಯಕ್ಷರು ದೋಗು ನಾಯಕ್ ಸದಸ್ಯರಿಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರದ ಸದಸ್ಯರು ಅಟಿ ತಿಂಗಳಲ್ಲಿ ಸಿಗುವಂತಹ ಪೌಷ್ಟಿಕ ಆಹಾರ ಪದಾರ್ಥಗಳನ್ನು ಮಾಡಿ ತಂದಿದ್ದರು. ಆಟೋಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು ಇದರಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಯೋಜಕಿ ಶುಭಲತ ಕಾರ್ಯಕ್ರಮ ನಿರೂಪಿಸಿ, ಸೇವಾ ಪ್ರತಿನಿಧಿ ಶೋಭಾ ಸ್ವಾಗತಿಸಿದರು. ಕಾರ್ಯದರ್ಶಿ ಸಚಿತ ಧನ್ಯವಾದವಿತ್ತರು.

Related posts

ಮುಂಡಾಜೆ : ಬಂಡಿಮಠ ನಿವಾಸಿ ಪುರಲ್ಲ ನಿಧನ

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

Suddi Udaya

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!