23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೇಣೂರು ವಲಯದ ಕರಿಮಣೇಲು ಕಾರ್ಯ ಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನೂ ಒಕ್ಕೂಟದ ಅಧ್ಯಕ್ಷ ವಿಲಿಯಂ ವಿನ್ಸೆಂಟ್ ರೇಗೊರವರು ಉದ್ಘಾಟಿಸಿದರು.
ಬೆಳ್ತಂಗಡಿ ಕ್ಷೇತ್ರ ಶಿಕ್ಷಣ ಆರೋಗ್ಯ ಅಧಿಕಾರಿ ಆಮ್ಮಿ ಇವರು ಕೇಂದ್ರದ ಸದಸ್ಯರಿಗೆ ಪೌಷ್ಟಿಕ ಆಹಾರದ ಬಗ್ಗೆ ಹಾಗೂ ಮಹಿಳೆಯರಲ್ಲಿ ಬರುವಂತಹ ಕೆಲವೊಂದು ಸಮಸ್ಯೆ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಜ್ಞಾನ ವಿಕಾಸ ಸಮಣ್ವಯ ಅಧಿಕಾರಿ ಪೂರ್ಣಿಮಾ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕರು ಶಾಲಿನಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಮಾಜಿ ಅಧ್ಯಕ್ಷರು ದೋಗು ನಾಯಕ್ ಸದಸ್ಯರಿಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರದ ಸದಸ್ಯರು ಅಟಿ ತಿಂಗಳಲ್ಲಿ ಸಿಗುವಂತಹ ಪೌಷ್ಟಿಕ ಆಹಾರ ಪದಾರ್ಥಗಳನ್ನು ಮಾಡಿ ತಂದಿದ್ದರು. ಆಟೋಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು ಇದರಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಯೋಜಕಿ ಶುಭಲತ ಕಾರ್ಯಕ್ರಮ ನಿರೂಪಿಸಿ, ಸೇವಾ ಪ್ರತಿನಿಧಿ ಶೋಭಾ ಸ್ವಾಗತಿಸಿದರು. ಕಾರ್ಯದರ್ಶಿ ಸಚಿತ ಧನ್ಯವಾದವಿತ್ತರು.

Related posts

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

Suddi Udaya

ಹೊಸ ವಿದ್ಯುತ್ ಸಂಪರ್ಕಗಳಿಗೆ ಇನ್ನು ಬರಲಿದೆ..ಸ್ಮಾರ್ಟ್ ಮೀಟರ್: ಮೊಬೈಲ್ ಮೂಲಕ ಪ್ರೀ ಪೇಯ್ಡ್ ಪೋಸ್ಟ್ ಪೇಯ್ಡ್ ಸೌಲಭ್ಯ

Suddi Udaya

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya
error: Content is protected !!