30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

ಅಳದಂಗಡಿ: ಕಳೆದ ಕೆಲ ದಿನಗಳಿಂದ ಧಾರಕಾರವಾಗಿ ಸುರಿದ ಮಳೆ ನೀರು ಸರಾಗವಾಗಿ ಹರಿಯದೆ ಕೊಡಂಗೆ ದೈಲಬೈಲು ತೋಡು ಕುಸಿದು ಹಲವರ ಕೃಷಿ ಭೂಮಿ ಮುಳುಗಡೆಯಾಗಿದೆ.

ಕಳೆದ ಹಲವು ವರ್ಷಗಳಿಂದ ಕೊಡಂಗೆ ದೈಲಬೈಲು ತೋಡು ಕುಸಿದು ಮಳೆ ನೀರು ಈ ಭಾಗದ ಸಂಜೀವ ಪೂಜಾರಿ ಕೊಡಂಗೆ, ಅಲೋಶಿಯಸ್ ಡಿಸೋಜ, ಎಲ್ವಿಸ್ ವಾಸ್ ಹಾಗೂ ಸುಮಾರು 10 ರೈತರ ತೋಟಗಳಿಗೆ ನೀರು ತುಂಬಿ ಕೃಷಿ ಭೂಮಿ ಮುಳುಗಡೆಯಾಗಿ ನಷ್ಟವಾಗಿದೆ.

ಕೃಷಿಕರ ಸಂಕಷ್ಟ ಕೇಳುವವರೇ ಇಲ್ಲ

ಕಳೆದ 3 ವರ್ಷದಿಂದ ನಮಗೆ ಮಳೆಗಾಲದಲ್ಲಿ ಸಮಸ್ಯೆ ಎದುರಾಗುತ್ತಿದೆ. ಈ ಭಾಗದ ತೋಟದಲ್ಲಿ ಪ್ರತಿ ವರ್ಷ ಅಡಿಕೆ ಮರಗಳು ಕೊಳೆ ರೋಗಕ್ಕೆ ತುತ್ತಾಗುತ್ತಿವೆ. ಇಲ್ಲಿ ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು. ಸಂಬಂಧಪಟ್ಟವರು ಶೀಘ್ರವೇ ಎಚ್ಚೆತ್ತುಕೊಂಡು ಈ ಸಮಸ್ಯೆಯನ್ನು ಬಗೆಹರಿಸಿ ಈ ಭಾಗದ ಕೃಷಿಕರನ್ನು ಸಂಕಷ್ಟದಿಂದ ಪಾರು ಮಾಡಬೇಕಾಗಿದೆ ಎಂದು ಸಂಜೀವ ಪೂಜಾರಿ ಕೊಡಂಗೆ ತಿಳಿಸಿದರು.

Related posts

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ಮೇ 31: ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಉದ್ಘಾಟನೆ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya
error: Content is protected !!