July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

ಅಳದಂಗಡಿ: ಕಳೆದ ಕೆಲ ದಿನಗಳಿಂದ ಧಾರಕಾರವಾಗಿ ಸುರಿದ ಮಳೆ ನೀರು ಸರಾಗವಾಗಿ ಹರಿಯದೆ ಕೊಡಂಗೆ ದೈಲಬೈಲು ತೋಡು ಕುಸಿದು ಹಲವರ ಕೃಷಿ ಭೂಮಿ ಮುಳುಗಡೆಯಾಗಿದೆ.

ಕಳೆದ ಹಲವು ವರ್ಷಗಳಿಂದ ಕೊಡಂಗೆ ದೈಲಬೈಲು ತೋಡು ಕುಸಿದು ಮಳೆ ನೀರು ಈ ಭಾಗದ ಸಂಜೀವ ಪೂಜಾರಿ ಕೊಡಂಗೆ, ಅಲೋಶಿಯಸ್ ಡಿಸೋಜ, ಎಲ್ವಿಸ್ ವಾಸ್ ಹಾಗೂ ಸುಮಾರು 10 ರೈತರ ತೋಟಗಳಿಗೆ ನೀರು ತುಂಬಿ ಕೃಷಿ ಭೂಮಿ ಮುಳುಗಡೆಯಾಗಿ ನಷ್ಟವಾಗಿದೆ.

ಕೃಷಿಕರ ಸಂಕಷ್ಟ ಕೇಳುವವರೇ ಇಲ್ಲ

ಕಳೆದ 3 ವರ್ಷದಿಂದ ನಮಗೆ ಮಳೆಗಾಲದಲ್ಲಿ ಸಮಸ್ಯೆ ಎದುರಾಗುತ್ತಿದೆ. ಈ ಭಾಗದ ತೋಟದಲ್ಲಿ ಪ್ರತಿ ವರ್ಷ ಅಡಿಕೆ ಮರಗಳು ಕೊಳೆ ರೋಗಕ್ಕೆ ತುತ್ತಾಗುತ್ತಿವೆ. ಇಲ್ಲಿ ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು. ಸಂಬಂಧಪಟ್ಟವರು ಶೀಘ್ರವೇ ಎಚ್ಚೆತ್ತುಕೊಂಡು ಈ ಸಮಸ್ಯೆಯನ್ನು ಬಗೆಹರಿಸಿ ಈ ಭಾಗದ ಕೃಷಿಕರನ್ನು ಸಂಕಷ್ಟದಿಂದ ಪಾರು ಮಾಡಬೇಕಾಗಿದೆ ಎಂದು ಸಂಜೀವ ಪೂಜಾರಿ ಕೊಡಂಗೆ ತಿಳಿಸಿದರು.

Related posts

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ ಶಾಖೆ” ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ನಾವೂರು: ಯುವಕ ನೇಣುಬಿಗಿದು‌ ಆತ್ಮಹತ್ಯೆ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya
error: Content is protected !!