April 7, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

ಬೆಳ್ತಂಗಡಿ : ಮನೆಯ ಬಾವಿಗೆ ಜಾರಿ ಬಿದ್ದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ನಗರದಲ್ಲಿ ಆ.2 ರಂದು ನಡೆದಿದೆ.

ಬೆಳ್ತಂಗಡಿ ಗುರುದೇವ ಕಾಲೇಜು ರಸ್ತೆಯಲ್ಲಿರುವ ಸೀಡ್ ಫಾರ್ಮ್ ಬಳಿ ಇರುವ ಮನೆಯ ಬಾವಿಗೆ ಸಂಜೆ ಆಕಸ್ಮಿಕವಾಗಿ ಜಾರಿ ಬಿದ್ದು ಸುಮಾಲಿನಿ ಜೈನ್ (63) ಎಂಬವರು ಸಾವನ್ನಪ್ಪಿದ್ದಾರೆ.

ಕೆಲಸದ ನಿಮ್ಮಿತ ಗಂಡ ಹೊರಗಡೆ ಹೋಗಿದ್ದು ಮನೆಗೆ ಬಂದಾಗ ಬಾವಿಯಲ್ಲಿ ಶಬ್ದ ಕೇಳಿಸಿದೆ ನೋಡಿದಾಗ ಪತ್ಮಿ ನೀರಿನಲ್ಲಿ ರಕ್ಷಣೆಗೆ ಬಡಿದಾಟ ಮಾಡುತ್ತಿರುವುದು ಕಂಡಿದೆ ತಕ್ಷಣ ಆಂಬುಲೆನ್ಸ್ ಬಾಬಾ ಜಲೀಲ್ ಅವರಿಗೆ ಕರೆ ಮಾಡಿ ಕರೆಸಿ ಬಾವಿಗೆ ಹಗ್ಗ ಹಾಕಿ ವೃದ್ಧೆಯನ್ನು ಮೇಲಕ್ಕೆತ್ತಿ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದಾಗ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವೃದ್ಧೆಗೆ ಅನಾರೋಗ್ಯ ಇದ್ದು ಇದರಿಂದ ಬಾವಿಗೆ ಜಾರಿ ಬಿದ್ದಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ