July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

ಬೆಳ್ತಂಗಡಿ : ಮನೆಯ ಬಾವಿಗೆ ಜಾರಿ ಬಿದ್ದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ನಗರದಲ್ಲಿ ಆ.2 ರಂದು ನಡೆದಿದೆ.

ಬೆಳ್ತಂಗಡಿ ಗುರುದೇವ ಕಾಲೇಜು ರಸ್ತೆಯಲ್ಲಿರುವ ಸೀಡ್ ಫಾರ್ಮ್ ಬಳಿ ಇರುವ ಮನೆಯ ಬಾವಿಗೆ ಸಂಜೆ ಆಕಸ್ಮಿಕವಾಗಿ ಜಾರಿ ಬಿದ್ದು ಸುಮಾಲಿನಿ ಜೈನ್ (63) ಎಂಬವರು ಸಾವನ್ನಪ್ಪಿದ್ದಾರೆ.

ಕೆಲಸದ ನಿಮ್ಮಿತ ಗಂಡ ಹೊರಗಡೆ ಹೋಗಿದ್ದು ಮನೆಗೆ ಬಂದಾಗ ಬಾವಿಯಲ್ಲಿ ಶಬ್ದ ಕೇಳಿಸಿದೆ ನೋಡಿದಾಗ ಪತ್ಮಿ ನೀರಿನಲ್ಲಿ ರಕ್ಷಣೆಗೆ ಬಡಿದಾಟ ಮಾಡುತ್ತಿರುವುದು ಕಂಡಿದೆ ತಕ್ಷಣ ಆಂಬುಲೆನ್ಸ್ ಬಾಬಾ ಜಲೀಲ್ ಅವರಿಗೆ ಕರೆ ಮಾಡಿ ಕರೆಸಿ ಬಾವಿಗೆ ಹಗ್ಗ ಹಾಕಿ ವೃದ್ಧೆಯನ್ನು ಮೇಲಕ್ಕೆತ್ತಿ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದಾಗ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವೃದ್ಧೆಗೆ ಅನಾರೋಗ್ಯ ಇದ್ದು ಇದರಿಂದ ಬಾವಿಗೆ ಜಾರಿ ಬಿದ್ದಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

Suddi Udaya

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya
error: Content is protected !!