23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

ಬೆಳ್ತಂಗಡಿ: ದುಬೈ ಮೂಲದ ಆಲ್ ಜಬೇರ್ ಕಂಪನಿಯಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉಜಿರೆ ಮೂಲದ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರವರಿಂದ ಹಂತ ಹಂತವಾಗಿ ಹಣವನ್ನು ಖಾತೆಗೆ ವರ್ಗಾಯಿಸಿಕೊಂಡ ಘಟನೆ ಜು.31 ರಂದು ನಡೆದಿದೆ.

ಉಜಿರೆ ಮಂಜುಶ್ರೀ ನಗರ ನಿವಾಸಿ ಕೊನ್ಸಟೆನಿ ಅಲ್ಪೋನ್ಸ್‌ ಕರ್ಡೋಜ್ (64 ವರ್ಷ)ಎಂಬವರು ಈ ಹಿಂದೆ ವಿದೇಶದಲ್ಲಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದವರು, ಕಳೆದ 4.5 ವರ್ಷದಿಂದ ಊರಿನಲ್ಲಿಯೇ ಇದ್ದವರು ಫೇಸ್ಬುಕ್ ಜಾಲತಾಣದ ಲಿಂಕ್ ಮುಖಾಂತರ ದುಬೈ ಮೂಲದ ಆಲ್ ಜಬೇರ್ (al jaber) ಕಂಪನಿಯಲ್ಲಿ ಉತ್ತಮ ಸಂಬಳದ ಉದ್ಯೋಗದ ಭರವಸೆ ಇರುವುದನ್ನು ಸತ್ಯ ಎಂದು ನಂಬಿ, ಲಿಂಕ್ ಮೂಲಕ ಅಪರಿಚಿತ ಕಂಪನಿಯ HRA ಅಧಿಕಾರಿ ಎಂದು ನಂಬಿಸಿ, ನಂತರ ಪಿರ್ಯಾದುದಾರರು ಆತನ ಮೊಬೈಲ್ ನಂಬ್ರ ಪಡೆದುಕೊಂಡು, ಆತನೊಂದಿಗೆ ವಾಟ್ಸಾಪ್ ಮೂಲಕ ಸಂವಹನ ಬೆಳೆಸಿದಾಗ ಪ್ರಾರಂಭಿಕ ಖರ್ಚು ಎಂದು ಅಲ್ಪೋನ್ಸ್‌ ಕರ್ಡೋಜ್ ನಂಬಿಸಿ ಅಲ್ಪೋನ್ಸ್‌ ಕರ್ಡೋಜ್ ರಿಂದ ಅಪರಿಚಿತನ ಬ್ಯಾಂಕ್ ಖಾತೆಗೆ ಜು. 24 ರಿಂದ ಜು.31 ರವರೆಗೆ ಹಂತ ಹಂತವಾಗಿ ರೂ. 2,72,621/- ಮೊತ್ತ ನಗದನ್ನು ಆತನ ಖಾತೆಗೆ ವರ್ಗಾಯಿಸಿಕೊಂಡು, ಇನ್ನಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅಲ್ಪೋನ್ಸ್‌ ಕರ್ಡೋಜ್ ಮೋಸ ಹೋಗಿರುವ ಬಗ್ಗೆ ತಿಳಿದು, ನಂಬಿಸಿ ಮೋಸ ಮಾಡಿದ ಅಪರಿಚಿತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೀಡಿದ ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ. 77/2024 ಕಲಂ: 318(2), 318(4) ಭಾರತೀಯ ನ್ಯಾಯ ಸಂಹಿತೆ ಮತ್ತು 67(D) IT act ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂಥ ವಲಯದ ಹಲೇಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!