22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

ಬೆಳ್ತಂಗಡಿ: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಗೆ ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸದೆ, ಕರ್ತವ್ಯ ಲೋಪ ಮಾಡಿರುವ ಮರೋಡಿ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.1 ರಂದು ಅಮಾನತುಗೊಳಿಸುವುದಾಗಿ ತಿಳಿಸಿದ್ದಾರೆ.

ಮರೋಡಿ ಗ್ರಾ.ಪಂ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದ ಸಂದರ್ಭದಲ್ಲಿ ಮರೋಡಿ ಗ್ರಾ.ಪಂ ಅಧ್ಯಕ್ಷ ರತ್ನಾಕರ ಬುಣ್ಣನ್ ಗ್ರಾಮ ಲೆಕ್ಕಾಧಿಕಾರಿಯ ಕರ್ತವ್ಯ ಲೋಪದ ಬಗ್ಗೆ ವಿವರಿಸಿದ್ದು ತಕ್ಷಣ ಜಿಲ್ಲಾಧಿಕಾರಿ ಅಮಾನುತುಗೊಳಿಸಲು ತಹಶೀಲ್ದಾರರಿಗೆ ಸೂಚಿಸಿದರು.

ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಕಂದಾಯ ಇಲಾಖೆಗೆ ಸಂಭಂಧಿಸಿದ ಕೆಲಸವನ್ನು ಸರಿಯಾಗಿ ಮಾಡಿಕೊಡುತ್ತಿರಲಿಲ್ಲ. ಯಾವುದೇ ಮಾಹಿತಿಯನ್ನು ತಿಳಿಸುತ್ತಿರಲಿಲ್ಲ. ಮಳೆ ಹಾನಿಯಾದ ಪ್ರದೇಶಕ್ಕೂ ಮಳೆ ಹಾನಿಯಿಂದ ಸಮಸ್ಯೆ ಆದರೂ ಭೇಟಿ ನೀಡಲಿಲ್ಲ ಎಂದು ಅಧ್ಯಕ್ಷರು ಸಹಿತ ಗ್ರಾಮಸ್ಥರು ಆರೋಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಕರಣಿಕ ಶಿವಕುಮಾರ್ ಅವರನ್ನು ವಿಚಾರಿಸಿದಾಗ ಗ್ರಾಮಕರಣಿಕ ಸಮಪ೯ಕ ಉತ್ತರ ನೀಡದಿರುವುದರಿಂದ ಅವರನ್ನು ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಧ್ಯಮ ಗಳಿಗೆ ತಿಳಿಸಿದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಒಂದು ದಿನದ ಕಾವ್ಯ ರಚನಾ ಕಮ್ಮಟಕ್ಕೆ ಚಾಲನೆ

Suddi Udaya

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ಆ.14 ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಅರ್ಹ ವಿದ್ಯಾರ್ಥಿಗಳಿಗೆ ರೂ.20 ಲಕ್ಷ ಸ್ಕಾಲರ್ ಸಿಪ್ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

Suddi Udaya

“ಕುರಾಯದೊಡೆಯ” ಭಕ್ತಿಗೀತೆಯ ಧ್ವನಿ ಸುರುಳಿ ಬಿಡುಗಡೆ

Suddi Udaya
error: Content is protected !!