23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

ಬೆಳ್ತಂಗಡಿ: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಗೆ ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸದೆ, ಕರ್ತವ್ಯ ಲೋಪ ಮಾಡಿರುವ ಮರೋಡಿ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.1 ರಂದು ಅಮಾನತುಗೊಳಿಸುವುದಾಗಿ ತಿಳಿಸಿದ್ದಾರೆ.

ಮರೋಡಿ ಗ್ರಾ.ಪಂ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದ ಸಂದರ್ಭದಲ್ಲಿ ಮರೋಡಿ ಗ್ರಾ.ಪಂ ಅಧ್ಯಕ್ಷ ರತ್ನಾಕರ ಬುಣ್ಣನ್ ಗ್ರಾಮ ಲೆಕ್ಕಾಧಿಕಾರಿಯ ಕರ್ತವ್ಯ ಲೋಪದ ಬಗ್ಗೆ ವಿವರಿಸಿದ್ದು ತಕ್ಷಣ ಜಿಲ್ಲಾಧಿಕಾರಿ ಅಮಾನುತುಗೊಳಿಸಲು ತಹಶೀಲ್ದಾರರಿಗೆ ಸೂಚಿಸಿದರು.

ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಕಂದಾಯ ಇಲಾಖೆಗೆ ಸಂಭಂಧಿಸಿದ ಕೆಲಸವನ್ನು ಸರಿಯಾಗಿ ಮಾಡಿಕೊಡುತ್ತಿರಲಿಲ್ಲ. ಯಾವುದೇ ಮಾಹಿತಿಯನ್ನು ತಿಳಿಸುತ್ತಿರಲಿಲ್ಲ. ಮಳೆ ಹಾನಿಯಾದ ಪ್ರದೇಶಕ್ಕೂ ಮಳೆ ಹಾನಿಯಿಂದ ಸಮಸ್ಯೆ ಆದರೂ ಭೇಟಿ ನೀಡಲಿಲ್ಲ ಎಂದು ಅಧ್ಯಕ್ಷರು ಸಹಿತ ಗ್ರಾಮಸ್ಥರು ಆರೋಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಕರಣಿಕ ಶಿವಕುಮಾರ್ ಅವರನ್ನು ವಿಚಾರಿಸಿದಾಗ ಗ್ರಾಮಕರಣಿಕ ಸಮಪ೯ಕ ಉತ್ತರ ನೀಡದಿರುವುದರಿಂದ ಅವರನ್ನು ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಧ್ಯಮ ಗಳಿಗೆ ತಿಳಿಸಿದರು.

Related posts

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya

ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಸಹಸಂಸ್ಥೆ ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya
error: Content is protected !!