September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

ಬೆಳ್ತಂಗಡಿ: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಗೆ ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸದೆ, ಕರ್ತವ್ಯ ಲೋಪ ಮಾಡಿರುವ ಮರೋಡಿ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.1 ರಂದು ಅಮಾನತುಗೊಳಿಸುವುದಾಗಿ ತಿಳಿಸಿದ್ದಾರೆ.

ಮರೋಡಿ ಗ್ರಾ.ಪಂ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದ ಸಂದರ್ಭದಲ್ಲಿ ಮರೋಡಿ ಗ್ರಾ.ಪಂ ಅಧ್ಯಕ್ಷ ರತ್ನಾಕರ ಬುಣ್ಣನ್ ಗ್ರಾಮ ಲೆಕ್ಕಾಧಿಕಾರಿಯ ಕರ್ತವ್ಯ ಲೋಪದ ಬಗ್ಗೆ ವಿವರಿಸಿದ್ದು ತಕ್ಷಣ ಜಿಲ್ಲಾಧಿಕಾರಿ ಅಮಾನುತುಗೊಳಿಸಲು ತಹಶೀಲ್ದಾರರಿಗೆ ಸೂಚಿಸಿದರು.

ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಕಂದಾಯ ಇಲಾಖೆಗೆ ಸಂಭಂಧಿಸಿದ ಕೆಲಸವನ್ನು ಸರಿಯಾಗಿ ಮಾಡಿಕೊಡುತ್ತಿರಲಿಲ್ಲ. ಯಾವುದೇ ಮಾಹಿತಿಯನ್ನು ತಿಳಿಸುತ್ತಿರಲಿಲ್ಲ. ಮಳೆ ಹಾನಿಯಾದ ಪ್ರದೇಶಕ್ಕೂ ಮಳೆ ಹಾನಿಯಿಂದ ಸಮಸ್ಯೆ ಆದರೂ ಭೇಟಿ ನೀಡಲಿಲ್ಲ ಎಂದು ಅಧ್ಯಕ್ಷರು ಸಹಿತ ಗ್ರಾಮಸ್ಥರು ಆರೋಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಕರಣಿಕ ಶಿವಕುಮಾರ್ ಅವರನ್ನು ವಿಚಾರಿಸಿದಾಗ ಗ್ರಾಮಕರಣಿಕ ಸಮಪ೯ಕ ಉತ್ತರ ನೀಡದಿರುವುದರಿಂದ ಅವರನ್ನು ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಧ್ಯಮ ಗಳಿಗೆ ತಿಳಿಸಿದರು.

Related posts

ಶಿಶಿಲ: ಹೊಸಕಟ್ಟೆಯಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ ಸ್ಥಾನ

Suddi Udaya

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!