July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರೋಡಿ ಮತ್ತು ಪೆರಾಡಿ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ಎಲ್ಲೆಡೆ ಎಡಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಭೂಕುಸಿತ, ಮರಗಳು ಧರೆಗೆ ಉರುಳಿದ್ದು, ರಸ್ತೆಗಳಿಗೆ ಹಾನಿ, ಕೃಷಿ ನಾಶದಂತಹ ಅನಾಹುತಗಳು ಸಂಭವಿಸಿವೆ.

ಮರೋಡಿ ಗ್ರಾಮದ ಶಾಂತಿ ನಗರದಿಂದ ದೇರಾಜೆ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಸೇತುವೆ ಕೊಚ್ಚಿ ಹೋಗಿ ಸಂಪರ್ಕ ಕಡಿತ, ಕಾಯೇರುಬೈಲು ರಸ್ತೆಯ ರಾಗಿಮೇಲು ಎಂಬಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.

ಪಾಣಾಲು ಸೇತುವೆಗೆ ಹಾನಿ, ಕೋಂಟಡ್ಕ ಎಂಬಲ್ಲಿ ಮೋರಿ ಕುಸಿತ, ಉಳಗುಡ್ಡೆ ಎಂಬಲ್ಲಿ ಮರಬಿದ್ದು ವಿದ್ಯುತ್ ಲೈನಿಗೆ ಹಾನಿ, ಕಲ್ಲಟ್ಟ ಎಂಬಲ್ಲಿ ಕಾಲುಸಂಖ ಕೊಚ್ಚಿ ಹೋಗಿ ಸಂಪರ್ಕ ಕಡಿತ, ಪೆರಾಡಿ ಗ್ರಾಮದ ಬೀರೊಟ್ಟು ಎಂಬಲ್ಲಿ ರಸ್ತೆಯ ತಡೆಗೋಡೆ ಕೊಚ್ಚಿ ಹೋಗಿದ್ದು, ನೆಲ್ಲಿಂಗೇರಿ ಕ್ರಾಸ್ ಬಳಿ ರಸ್ತೆ ಸಂಚಾರಕ್ಕೆ ಅಡಚಣೆಯಂತಹ ಪ್ರದೇಶಗಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾಕರ್ ಬುಣ್ಣಾನ್, ಪಿಡಿಒ ಆಶಾಲತಾ ಎಚ್, ಸದಸ್ಯರಾದ ಪದ್ಮಶ್ರೀ ಜೈನ್, ಅಶೋಕ ಪೂಜಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಂಡರು.

Related posts

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya
error: Content is protected !!