23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರೋಡಿ ಮತ್ತು ಪೆರಾಡಿ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ಎಲ್ಲೆಡೆ ಎಡಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಭೂಕುಸಿತ, ಮರಗಳು ಧರೆಗೆ ಉರುಳಿದ್ದು, ರಸ್ತೆಗಳಿಗೆ ಹಾನಿ, ಕೃಷಿ ನಾಶದಂತಹ ಅನಾಹುತಗಳು ಸಂಭವಿಸಿವೆ.

ಮರೋಡಿ ಗ್ರಾಮದ ಶಾಂತಿ ನಗರದಿಂದ ದೇರಾಜೆ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಸೇತುವೆ ಕೊಚ್ಚಿ ಹೋಗಿ ಸಂಪರ್ಕ ಕಡಿತ, ಕಾಯೇರುಬೈಲು ರಸ್ತೆಯ ರಾಗಿಮೇಲು ಎಂಬಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.

ಪಾಣಾಲು ಸೇತುವೆಗೆ ಹಾನಿ, ಕೋಂಟಡ್ಕ ಎಂಬಲ್ಲಿ ಮೋರಿ ಕುಸಿತ, ಉಳಗುಡ್ಡೆ ಎಂಬಲ್ಲಿ ಮರಬಿದ್ದು ವಿದ್ಯುತ್ ಲೈನಿಗೆ ಹಾನಿ, ಕಲ್ಲಟ್ಟ ಎಂಬಲ್ಲಿ ಕಾಲುಸಂಖ ಕೊಚ್ಚಿ ಹೋಗಿ ಸಂಪರ್ಕ ಕಡಿತ, ಪೆರಾಡಿ ಗ್ರಾಮದ ಬೀರೊಟ್ಟು ಎಂಬಲ್ಲಿ ರಸ್ತೆಯ ತಡೆಗೋಡೆ ಕೊಚ್ಚಿ ಹೋಗಿದ್ದು, ನೆಲ್ಲಿಂಗೇರಿ ಕ್ರಾಸ್ ಬಳಿ ರಸ್ತೆ ಸಂಚಾರಕ್ಕೆ ಅಡಚಣೆಯಂತಹ ಪ್ರದೇಶಗಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾಕರ್ ಬುಣ್ಣಾನ್, ಪಿಡಿಒ ಆಶಾಲತಾ ಎಚ್, ಸದಸ್ಯರಾದ ಪದ್ಮಶ್ರೀ ಜೈನ್, ಅಶೋಕ ಪೂಜಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಂಡರು.

Related posts

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

Suddi Udaya

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya
error: Content is protected !!