25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

ಅಳದಂಗಡಿ: ಕಳೆದ ಕೆಲ ದಿನಗಳಿಂದ ಧಾರಕಾರವಾಗಿ ಸುರಿದ ಮಳೆ ನೀರು ಸರಾಗವಾಗಿ ಹರಿಯದೆ ಕೊಡಂಗೆ ದೈಲಬೈಲು ತೋಡು ಕುಸಿದು ಹಲವರ ಕೃಷಿ ಭೂಮಿ ಮುಳುಗಡೆಯಾಗಿದೆ.

ಕಳೆದ ಹಲವು ವರ್ಷಗಳಿಂದ ಕೊಡಂಗೆ ದೈಲಬೈಲು ತೋಡು ಕುಸಿದು ಮಳೆ ನೀರು ಈ ಭಾಗದ ಸಂಜೀವ ಪೂಜಾರಿ ಕೊಡಂಗೆ, ಅಲೋಶಿಯಸ್ ಡಿಸೋಜ, ಎಲ್ವಿಸ್ ವಾಸ್ ಹಾಗೂ ಸುಮಾರು 10 ರೈತರ ತೋಟಗಳಿಗೆ ನೀರು ತುಂಬಿ ಕೃಷಿ ಭೂಮಿ ಮುಳುಗಡೆಯಾಗಿ ನಷ್ಟವಾಗಿದೆ.

ಕೃಷಿಕರ ಸಂಕಷ್ಟ ಕೇಳುವವರೇ ಇಲ್ಲ

ಕಳೆದ 3 ವರ್ಷದಿಂದ ನಮಗೆ ಮಳೆಗಾಲದಲ್ಲಿ ಸಮಸ್ಯೆ ಎದುರಾಗುತ್ತಿದೆ. ಈ ಭಾಗದ ತೋಟದಲ್ಲಿ ಪ್ರತಿ ವರ್ಷ ಅಡಿಕೆ ಮರಗಳು ಕೊಳೆ ರೋಗಕ್ಕೆ ತುತ್ತಾಗುತ್ತಿವೆ. ಇಲ್ಲಿ ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು. ಸಂಬಂಧಪಟ್ಟವರು ಶೀಘ್ರವೇ ಎಚ್ಚೆತ್ತುಕೊಂಡು ಈ ಸಮಸ್ಯೆಯನ್ನು ಬಗೆಹರಿಸಿ ಈ ಭಾಗದ ಕೃಷಿಕರನ್ನು ಸಂಕಷ್ಟದಿಂದ ಪಾರು ಮಾಡಬೇಕಾಗಿದೆ ಎಂದು ಸಂಜೀವ ಪೂಜಾರಿ ಕೊಡಂಗೆ ತಿಳಿಸಿದರು.

Related posts

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

Suddi Udaya
error: Content is protected !!