September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

ಅಳದಂಗಡಿ: ಕಳೆದ ಕೆಲ ದಿನಗಳಿಂದ ಧಾರಕಾರವಾಗಿ ಸುರಿದ ಮಳೆ ನೀರು ಸರಾಗವಾಗಿ ಹರಿಯದೆ ಕೊಡಂಗೆ ದೈಲಬೈಲು ತೋಡು ಕುಸಿದು ಹಲವರ ಕೃಷಿ ಭೂಮಿ ಮುಳುಗಡೆಯಾಗಿದೆ.

ಕಳೆದ ಹಲವು ವರ್ಷಗಳಿಂದ ಕೊಡಂಗೆ ದೈಲಬೈಲು ತೋಡು ಕುಸಿದು ಮಳೆ ನೀರು ಈ ಭಾಗದ ಸಂಜೀವ ಪೂಜಾರಿ ಕೊಡಂಗೆ, ಅಲೋಶಿಯಸ್ ಡಿಸೋಜ, ಎಲ್ವಿಸ್ ವಾಸ್ ಹಾಗೂ ಸುಮಾರು 10 ರೈತರ ತೋಟಗಳಿಗೆ ನೀರು ತುಂಬಿ ಕೃಷಿ ಭೂಮಿ ಮುಳುಗಡೆಯಾಗಿ ನಷ್ಟವಾಗಿದೆ.

ಕೃಷಿಕರ ಸಂಕಷ್ಟ ಕೇಳುವವರೇ ಇಲ್ಲ

ಕಳೆದ 3 ವರ್ಷದಿಂದ ನಮಗೆ ಮಳೆಗಾಲದಲ್ಲಿ ಸಮಸ್ಯೆ ಎದುರಾಗುತ್ತಿದೆ. ಈ ಭಾಗದ ತೋಟದಲ್ಲಿ ಪ್ರತಿ ವರ್ಷ ಅಡಿಕೆ ಮರಗಳು ಕೊಳೆ ರೋಗಕ್ಕೆ ತುತ್ತಾಗುತ್ತಿವೆ. ಇಲ್ಲಿ ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು. ಸಂಬಂಧಪಟ್ಟವರು ಶೀಘ್ರವೇ ಎಚ್ಚೆತ್ತುಕೊಂಡು ಈ ಸಮಸ್ಯೆಯನ್ನು ಬಗೆಹರಿಸಿ ಈ ಭಾಗದ ಕೃಷಿಕರನ್ನು ಸಂಕಷ್ಟದಿಂದ ಪಾರು ಮಾಡಬೇಕಾಗಿದೆ ಎಂದು ಸಂಜೀವ ಪೂಜಾರಿ ಕೊಡಂಗೆ ತಿಳಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!