38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

ಬೆಳ್ತಂಗಡಿ: ದುಬೈ ಮೂಲದ ಆಲ್ ಜಬೇರ್ ಕಂಪನಿಯಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉಜಿರೆ ಮೂಲದ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರವರಿಂದ ಹಂತ ಹಂತವಾಗಿ ಹಣವನ್ನು ಖಾತೆಗೆ ವರ್ಗಾಯಿಸಿಕೊಂಡ ಘಟನೆ ಜು.31 ರಂದು ನಡೆದಿದೆ.

ಉಜಿರೆ ಮಂಜುಶ್ರೀ ನಗರ ನಿವಾಸಿ ಕೊನ್ಸಟೆನಿ ಅಲ್ಪೋನ್ಸ್‌ ಕರ್ಡೋಜ್ (64 ವರ್ಷ)ಎಂಬವರು ಈ ಹಿಂದೆ ವಿದೇಶದಲ್ಲಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದವರು, ಕಳೆದ 4.5 ವರ್ಷದಿಂದ ಊರಿನಲ್ಲಿಯೇ ಇದ್ದವರು ಫೇಸ್ಬುಕ್ ಜಾಲತಾಣದ ಲಿಂಕ್ ಮುಖಾಂತರ ದುಬೈ ಮೂಲದ ಆಲ್ ಜಬೇರ್ (al jaber) ಕಂಪನಿಯಲ್ಲಿ ಉತ್ತಮ ಸಂಬಳದ ಉದ್ಯೋಗದ ಭರವಸೆ ಇರುವುದನ್ನು ಸತ್ಯ ಎಂದು ನಂಬಿ, ಲಿಂಕ್ ಮೂಲಕ ಅಪರಿಚಿತ ಕಂಪನಿಯ HRA ಅಧಿಕಾರಿ ಎಂದು ನಂಬಿಸಿ, ನಂತರ ಪಿರ್ಯಾದುದಾರರು ಆತನ ಮೊಬೈಲ್ ನಂಬ್ರ ಪಡೆದುಕೊಂಡು, ಆತನೊಂದಿಗೆ ವಾಟ್ಸಾಪ್ ಮೂಲಕ ಸಂವಹನ ಬೆಳೆಸಿದಾಗ ಪ್ರಾರಂಭಿಕ ಖರ್ಚು ಎಂದು ಅಲ್ಪೋನ್ಸ್‌ ಕರ್ಡೋಜ್ ನಂಬಿಸಿ ಅಲ್ಪೋನ್ಸ್‌ ಕರ್ಡೋಜ್ ರಿಂದ ಅಪರಿಚಿತನ ಬ್ಯಾಂಕ್ ಖಾತೆಗೆ ಜು. 24 ರಿಂದ ಜು.31 ರವರೆಗೆ ಹಂತ ಹಂತವಾಗಿ ರೂ. 2,72,621/- ಮೊತ್ತ ನಗದನ್ನು ಆತನ ಖಾತೆಗೆ ವರ್ಗಾಯಿಸಿಕೊಂಡು, ಇನ್ನಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅಲ್ಪೋನ್ಸ್‌ ಕರ್ಡೋಜ್ ಮೋಸ ಹೋಗಿರುವ ಬಗ್ಗೆ ತಿಳಿದು, ನಂಬಿಸಿ ಮೋಸ ಮಾಡಿದ ಅಪರಿಚಿತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೀಡಿದ ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ. 77/2024 ಕಲಂ: 318(2), 318(4) ಭಾರತೀಯ ನ್ಯಾಯ ಸಂಹಿತೆ ಮತ್ತು 67(D) IT act ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರ ಬಾಬು ಮತ್ತು ದ.ಕ. ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತ ಕರ್ತ ಭೇಟಿ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya
error: Content is protected !!