26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

ಬೆಳ್ತಂಗಡಿ: ದುಬೈ ಮೂಲದ ಆಲ್ ಜಬೇರ್ ಕಂಪನಿಯಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉಜಿರೆ ಮೂಲದ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರವರಿಂದ ಹಂತ ಹಂತವಾಗಿ ಹಣವನ್ನು ಖಾತೆಗೆ ವರ್ಗಾಯಿಸಿಕೊಂಡ ಘಟನೆ ಜು.31 ರಂದು ನಡೆದಿದೆ.

ಉಜಿರೆ ಮಂಜುಶ್ರೀ ನಗರ ನಿವಾಸಿ ಕೊನ್ಸಟೆನಿ ಅಲ್ಪೋನ್ಸ್‌ ಕರ್ಡೋಜ್ (64 ವರ್ಷ)ಎಂಬವರು ಈ ಹಿಂದೆ ವಿದೇಶದಲ್ಲಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದವರು, ಕಳೆದ 4.5 ವರ್ಷದಿಂದ ಊರಿನಲ್ಲಿಯೇ ಇದ್ದವರು ಫೇಸ್ಬುಕ್ ಜಾಲತಾಣದ ಲಿಂಕ್ ಮುಖಾಂತರ ದುಬೈ ಮೂಲದ ಆಲ್ ಜಬೇರ್ (al jaber) ಕಂಪನಿಯಲ್ಲಿ ಉತ್ತಮ ಸಂಬಳದ ಉದ್ಯೋಗದ ಭರವಸೆ ಇರುವುದನ್ನು ಸತ್ಯ ಎಂದು ನಂಬಿ, ಲಿಂಕ್ ಮೂಲಕ ಅಪರಿಚಿತ ಕಂಪನಿಯ HRA ಅಧಿಕಾರಿ ಎಂದು ನಂಬಿಸಿ, ನಂತರ ಪಿರ್ಯಾದುದಾರರು ಆತನ ಮೊಬೈಲ್ ನಂಬ್ರ ಪಡೆದುಕೊಂಡು, ಆತನೊಂದಿಗೆ ವಾಟ್ಸಾಪ್ ಮೂಲಕ ಸಂವಹನ ಬೆಳೆಸಿದಾಗ ಪ್ರಾರಂಭಿಕ ಖರ್ಚು ಎಂದು ಅಲ್ಪೋನ್ಸ್‌ ಕರ್ಡೋಜ್ ನಂಬಿಸಿ ಅಲ್ಪೋನ್ಸ್‌ ಕರ್ಡೋಜ್ ರಿಂದ ಅಪರಿಚಿತನ ಬ್ಯಾಂಕ್ ಖಾತೆಗೆ ಜು. 24 ರಿಂದ ಜು.31 ರವರೆಗೆ ಹಂತ ಹಂತವಾಗಿ ರೂ. 2,72,621/- ಮೊತ್ತ ನಗದನ್ನು ಆತನ ಖಾತೆಗೆ ವರ್ಗಾಯಿಸಿಕೊಂಡು, ಇನ್ನಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅಲ್ಪೋನ್ಸ್‌ ಕರ್ಡೋಜ್ ಮೋಸ ಹೋಗಿರುವ ಬಗ್ಗೆ ತಿಳಿದು, ನಂಬಿಸಿ ಮೋಸ ಮಾಡಿದ ಅಪರಿಚಿತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೀಡಿದ ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ. 77/2024 ಕಲಂ: 318(2), 318(4) ಭಾರತೀಯ ನ್ಯಾಯ ಸಂಹಿತೆ ಮತ್ತು 67(D) IT act ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya
error: Content is protected !!