23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

ಬೆಳ್ತಂಗಡಿ: ದುಬೈ ಮೂಲದ ಆಲ್ ಜಬೇರ್ ಕಂಪನಿಯಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉಜಿರೆ ಮೂಲದ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರವರಿಂದ ಹಂತ ಹಂತವಾಗಿ ಹಣವನ್ನು ಖಾತೆಗೆ ವರ್ಗಾಯಿಸಿಕೊಂಡ ಘಟನೆ ಜು.31 ರಂದು ನಡೆದಿದೆ.

ಉಜಿರೆ ಮಂಜುಶ್ರೀ ನಗರ ನಿವಾಸಿ ಕೊನ್ಸಟೆನಿ ಅಲ್ಪೋನ್ಸ್‌ ಕರ್ಡೋಜ್ (64 ವರ್ಷ)ಎಂಬವರು ಈ ಹಿಂದೆ ವಿದೇಶದಲ್ಲಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದವರು, ಕಳೆದ 4.5 ವರ್ಷದಿಂದ ಊರಿನಲ್ಲಿಯೇ ಇದ್ದವರು ಫೇಸ್ಬುಕ್ ಜಾಲತಾಣದ ಲಿಂಕ್ ಮುಖಾಂತರ ದುಬೈ ಮೂಲದ ಆಲ್ ಜಬೇರ್ (al jaber) ಕಂಪನಿಯಲ್ಲಿ ಉತ್ತಮ ಸಂಬಳದ ಉದ್ಯೋಗದ ಭರವಸೆ ಇರುವುದನ್ನು ಸತ್ಯ ಎಂದು ನಂಬಿ, ಲಿಂಕ್ ಮೂಲಕ ಅಪರಿಚಿತ ಕಂಪನಿಯ HRA ಅಧಿಕಾರಿ ಎಂದು ನಂಬಿಸಿ, ನಂತರ ಪಿರ್ಯಾದುದಾರರು ಆತನ ಮೊಬೈಲ್ ನಂಬ್ರ ಪಡೆದುಕೊಂಡು, ಆತನೊಂದಿಗೆ ವಾಟ್ಸಾಪ್ ಮೂಲಕ ಸಂವಹನ ಬೆಳೆಸಿದಾಗ ಪ್ರಾರಂಭಿಕ ಖರ್ಚು ಎಂದು ಅಲ್ಪೋನ್ಸ್‌ ಕರ್ಡೋಜ್ ನಂಬಿಸಿ ಅಲ್ಪೋನ್ಸ್‌ ಕರ್ಡೋಜ್ ರಿಂದ ಅಪರಿಚಿತನ ಬ್ಯಾಂಕ್ ಖಾತೆಗೆ ಜು. 24 ರಿಂದ ಜು.31 ರವರೆಗೆ ಹಂತ ಹಂತವಾಗಿ ರೂ. 2,72,621/- ಮೊತ್ತ ನಗದನ್ನು ಆತನ ಖಾತೆಗೆ ವರ್ಗಾಯಿಸಿಕೊಂಡು, ಇನ್ನಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅಲ್ಪೋನ್ಸ್‌ ಕರ್ಡೋಜ್ ಮೋಸ ಹೋಗಿರುವ ಬಗ್ಗೆ ತಿಳಿದು, ನಂಬಿಸಿ ಮೋಸ ಮಾಡಿದ ಅಪರಿಚಿತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೀಡಿದ ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ. 77/2024 ಕಲಂ: 318(2), 318(4) ಭಾರತೀಯ ನ್ಯಾಯ ಸಂಹಿತೆ ಮತ್ತು 67(D) IT act ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!