July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

ಬೆಳ್ತಂಗಡಿ: ದುಬೈ ಮೂಲದ ಆಲ್ ಜಬೇರ್ ಕಂಪನಿಯಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉಜಿರೆ ಮೂಲದ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರವರಿಂದ ಹಂತ ಹಂತವಾಗಿ ಹಣವನ್ನು ಖಾತೆಗೆ ವರ್ಗಾಯಿಸಿಕೊಂಡ ಘಟನೆ ಜು.31 ರಂದು ನಡೆದಿದೆ.

ಉಜಿರೆ ಮಂಜುಶ್ರೀ ನಗರ ನಿವಾಸಿ ಕೊನ್ಸಟೆನಿ ಅಲ್ಪೋನ್ಸ್‌ ಕರ್ಡೋಜ್ (64 ವರ್ಷ)ಎಂಬವರು ಈ ಹಿಂದೆ ವಿದೇಶದಲ್ಲಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದವರು, ಕಳೆದ 4.5 ವರ್ಷದಿಂದ ಊರಿನಲ್ಲಿಯೇ ಇದ್ದವರು ಫೇಸ್ಬುಕ್ ಜಾಲತಾಣದ ಲಿಂಕ್ ಮುಖಾಂತರ ದುಬೈ ಮೂಲದ ಆಲ್ ಜಬೇರ್ (al jaber) ಕಂಪನಿಯಲ್ಲಿ ಉತ್ತಮ ಸಂಬಳದ ಉದ್ಯೋಗದ ಭರವಸೆ ಇರುವುದನ್ನು ಸತ್ಯ ಎಂದು ನಂಬಿ, ಲಿಂಕ್ ಮೂಲಕ ಅಪರಿಚಿತ ಕಂಪನಿಯ HRA ಅಧಿಕಾರಿ ಎಂದು ನಂಬಿಸಿ, ನಂತರ ಪಿರ್ಯಾದುದಾರರು ಆತನ ಮೊಬೈಲ್ ನಂಬ್ರ ಪಡೆದುಕೊಂಡು, ಆತನೊಂದಿಗೆ ವಾಟ್ಸಾಪ್ ಮೂಲಕ ಸಂವಹನ ಬೆಳೆಸಿದಾಗ ಪ್ರಾರಂಭಿಕ ಖರ್ಚು ಎಂದು ಅಲ್ಪೋನ್ಸ್‌ ಕರ್ಡೋಜ್ ನಂಬಿಸಿ ಅಲ್ಪೋನ್ಸ್‌ ಕರ್ಡೋಜ್ ರಿಂದ ಅಪರಿಚಿತನ ಬ್ಯಾಂಕ್ ಖಾತೆಗೆ ಜು. 24 ರಿಂದ ಜು.31 ರವರೆಗೆ ಹಂತ ಹಂತವಾಗಿ ರೂ. 2,72,621/- ಮೊತ್ತ ನಗದನ್ನು ಆತನ ಖಾತೆಗೆ ವರ್ಗಾಯಿಸಿಕೊಂಡು, ಇನ್ನಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅಲ್ಪೋನ್ಸ್‌ ಕರ್ಡೋಜ್ ಮೋಸ ಹೋಗಿರುವ ಬಗ್ಗೆ ತಿಳಿದು, ನಂಬಿಸಿ ಮೋಸ ಮಾಡಿದ ಅಪರಿಚಿತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೀಡಿದ ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ. 77/2024 ಕಲಂ: 318(2), 318(4) ಭಾರತೀಯ ನ್ಯಾಯ ಸಂಹಿತೆ ಮತ್ತು 67(D) IT act ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಧಾರ್ಮಿಕ ಕ್ಷೇತ್ರಗಳ ಪ್ರವಾಸ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನ ಪ್ರಶಸ್ತಿಯ ಗೌರವ

Suddi Udaya
error: Content is protected !!