37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

ಬೆಳ್ತಂಗಡಿ: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಗೆ ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸದೆ, ಕರ್ತವ್ಯ ಲೋಪ ಮಾಡಿರುವ ಮರೋಡಿ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.1 ರಂದು ಅಮಾನತುಗೊಳಿಸುವುದಾಗಿ ತಿಳಿಸಿದ್ದಾರೆ.

ಮರೋಡಿ ಗ್ರಾ.ಪಂ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದ ಸಂದರ್ಭದಲ್ಲಿ ಮರೋಡಿ ಗ್ರಾ.ಪಂ ಅಧ್ಯಕ್ಷ ರತ್ನಾಕರ ಬುಣ್ಣನ್ ಗ್ರಾಮ ಲೆಕ್ಕಾಧಿಕಾರಿಯ ಕರ್ತವ್ಯ ಲೋಪದ ಬಗ್ಗೆ ವಿವರಿಸಿದ್ದು ತಕ್ಷಣ ಜಿಲ್ಲಾಧಿಕಾರಿ ಅಮಾನುತುಗೊಳಿಸಲು ತಹಶೀಲ್ದಾರರಿಗೆ ಸೂಚಿಸಿದರು.

ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಕಂದಾಯ ಇಲಾಖೆಗೆ ಸಂಭಂಧಿಸಿದ ಕೆಲಸವನ್ನು ಸರಿಯಾಗಿ ಮಾಡಿಕೊಡುತ್ತಿರಲಿಲ್ಲ. ಯಾವುದೇ ಮಾಹಿತಿಯನ್ನು ತಿಳಿಸುತ್ತಿರಲಿಲ್ಲ. ಮಳೆ ಹಾನಿಯಾದ ಪ್ರದೇಶಕ್ಕೂ ಮಳೆ ಹಾನಿಯಿಂದ ಸಮಸ್ಯೆ ಆದರೂ ಭೇಟಿ ನೀಡಲಿಲ್ಲ ಎಂದು ಅಧ್ಯಕ್ಷರು ಸಹಿತ ಗ್ರಾಮಸ್ಥರು ಆರೋಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಕರಣಿಕ ಶಿವಕುಮಾರ್ ಅವರನ್ನು ವಿಚಾರಿಸಿದಾಗ ಗ್ರಾಮಕರಣಿಕ ಸಮಪ೯ಕ ಉತ್ತರ ನೀಡದಿರುವುದರಿಂದ ಅವರನ್ನು ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಧ್ಯಮ ಗಳಿಗೆ ತಿಳಿಸಿದರು.

Related posts

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ರಾಜ್ಯ ಮಟ್ಟದ ಕರಾಟೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಿಗೆ ಬೆಳ್ಳಿ ಪದಕ

Suddi Udaya

ನಡ ಸರಕಾರಿ ಪ್ರೌಢಶಾಲೆ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya
error: Content is protected !!