24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

ಬೆಳ್ತಂಗಡಿ: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಗೆ ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸದೆ, ಕರ್ತವ್ಯ ಲೋಪ ಮಾಡಿರುವ ಮರೋಡಿ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.1 ರಂದು ಅಮಾನತುಗೊಳಿಸುವುದಾಗಿ ತಿಳಿಸಿದ್ದಾರೆ.

ಮರೋಡಿ ಗ್ರಾ.ಪಂ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದ ಸಂದರ್ಭದಲ್ಲಿ ಮರೋಡಿ ಗ್ರಾ.ಪಂ ಅಧ್ಯಕ್ಷ ರತ್ನಾಕರ ಬುಣ್ಣನ್ ಗ್ರಾಮ ಲೆಕ್ಕಾಧಿಕಾರಿಯ ಕರ್ತವ್ಯ ಲೋಪದ ಬಗ್ಗೆ ವಿವರಿಸಿದ್ದು ತಕ್ಷಣ ಜಿಲ್ಲಾಧಿಕಾರಿ ಅಮಾನುತುಗೊಳಿಸಲು ತಹಶೀಲ್ದಾರರಿಗೆ ಸೂಚಿಸಿದರು.

ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಕಂದಾಯ ಇಲಾಖೆಗೆ ಸಂಭಂಧಿಸಿದ ಕೆಲಸವನ್ನು ಸರಿಯಾಗಿ ಮಾಡಿಕೊಡುತ್ತಿರಲಿಲ್ಲ. ಯಾವುದೇ ಮಾಹಿತಿಯನ್ನು ತಿಳಿಸುತ್ತಿರಲಿಲ್ಲ. ಮಳೆ ಹಾನಿಯಾದ ಪ್ರದೇಶಕ್ಕೂ ಮಳೆ ಹಾನಿಯಿಂದ ಸಮಸ್ಯೆ ಆದರೂ ಭೇಟಿ ನೀಡಲಿಲ್ಲ ಎಂದು ಅಧ್ಯಕ್ಷರು ಸಹಿತ ಗ್ರಾಮಸ್ಥರು ಆರೋಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಕರಣಿಕ ಶಿವಕುಮಾರ್ ಅವರನ್ನು ವಿಚಾರಿಸಿದಾಗ ಗ್ರಾಮಕರಣಿಕ ಸಮಪ೯ಕ ಉತ್ತರ ನೀಡದಿರುವುದರಿಂದ ಅವರನ್ನು ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಧ್ಯಮ ಗಳಿಗೆ ತಿಳಿಸಿದರು.

Related posts

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ಉಜಿರೆ ಚಿದಾನಂದ ಗೌಡ ನಿಧನ

Suddi Udaya
error: Content is protected !!