September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

ಬೆಳ್ತಂಗಡಿ: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಗೆ ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸದೆ, ಕರ್ತವ್ಯ ಲೋಪ ಮಾಡಿರುವ ಮರೋಡಿ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.1 ರಂದು ಅಮಾನತುಗೊಳಿಸುವುದಾಗಿ ತಿಳಿಸಿದ್ದಾರೆ.

ಮರೋಡಿ ಗ್ರಾ.ಪಂ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದ ಸಂದರ್ಭದಲ್ಲಿ ಮರೋಡಿ ಗ್ರಾ.ಪಂ ಅಧ್ಯಕ್ಷ ರತ್ನಾಕರ ಬುಣ್ಣನ್ ಗ್ರಾಮ ಲೆಕ್ಕಾಧಿಕಾರಿಯ ಕರ್ತವ್ಯ ಲೋಪದ ಬಗ್ಗೆ ವಿವರಿಸಿದ್ದು ತಕ್ಷಣ ಜಿಲ್ಲಾಧಿಕಾರಿ ಅಮಾನುತುಗೊಳಿಸಲು ತಹಶೀಲ್ದಾರರಿಗೆ ಸೂಚಿಸಿದರು.

ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಕಂದಾಯ ಇಲಾಖೆಗೆ ಸಂಭಂಧಿಸಿದ ಕೆಲಸವನ್ನು ಸರಿಯಾಗಿ ಮಾಡಿಕೊಡುತ್ತಿರಲಿಲ್ಲ. ಯಾವುದೇ ಮಾಹಿತಿಯನ್ನು ತಿಳಿಸುತ್ತಿರಲಿಲ್ಲ. ಮಳೆ ಹಾನಿಯಾದ ಪ್ರದೇಶಕ್ಕೂ ಮಳೆ ಹಾನಿಯಿಂದ ಸಮಸ್ಯೆ ಆದರೂ ಭೇಟಿ ನೀಡಲಿಲ್ಲ ಎಂದು ಅಧ್ಯಕ್ಷರು ಸಹಿತ ಗ್ರಾಮಸ್ಥರು ಆರೋಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಕರಣಿಕ ಶಿವಕುಮಾರ್ ಅವರನ್ನು ವಿಚಾರಿಸಿದಾಗ ಗ್ರಾಮಕರಣಿಕ ಸಮಪ೯ಕ ಉತ್ತರ ನೀಡದಿರುವುದರಿಂದ ಅವರನ್ನು ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಧ್ಯಮ ಗಳಿಗೆ ತಿಳಿಸಿದರು.

Related posts

ಹತ್ಯಡ್ಕ ತುಂಬೆತ್ತಡ್ಕ ಕಾಳಬೈರವ ಸ್ವಾಮಿ ಶ್ರೀ ಮಾರಿ ಅಮ್ಮನ ಮಾರಿಗುಡಿಯಲ್ಲಿ ವಾರ್ಷಿಕ ಮಾರಿ ಪೂಜೆ ಉತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆದ್ರಬೆಟ್ಟು: ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!