24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸಮಸ್ಯೆ

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

ಶಿರೂರು ಮತ್ತು ಹಾಗೂ ಕೇರಳದ ವಯನಾಡ್ಭೂಕುಸಿತದಿಂದ ಎಚ್ಚೆತ್ತುಕೊಂಡ ಕರ್ನಾಟಕ ಸರ್ಕಾರ, ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ತೆರವಿಗೆ ಖಡಕ್ ಸೂಚನೆ ನೀಡಿದೆ. ಈ ಸಂಬಂಧ ಅರಣ್ಯ ಖಾತೆ ಸಚಿವ ಈಶ್ವ‌ರ್ ಖಂಡ್ರೆ ಅವರು ಸುತ್ತೋಲೆ ಹೊರಡಿಸಿದ್ದು, ಪಶ್ಚಿಮ ಘಟ್ಟದಲ್ಲಿ 2015ರಿಂದ ಈಚೆಗೆ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಅಲ್ಲದೇ ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015 ರಿಂದ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಪಶ್ಚಿಮ ಘಟ್ಟದ ಎಲ್ಲ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಬೇಕು. ಒಂದು ತಿಂಗಳ ಒಳಗಡೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಬೇಕೆಂದು ಈಶ್ವ‌ರ್ ಖಂಡ್ರೆ ಸೂಚಿಸಿದ್ದಾರೆ.ಶಿರೂರು, ವಯನಾಡ್ ಭೂಕುಸಿತ ರಾಜ್ಯಕ್ಕೆ ಎಚ್ಚರಿಕೆ ಗಂಟೆ ಆಗಿದ್ದು ಪಶ್ಚಿಮ ಘಟ್ಟದ ಉಳಿವಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ರಾಜ್ಯದ ಪಶ್ಚಿಮ ಘಟ್ಟದಲ್ಲಿ 2015 ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಅರಣ್ಯ ಸಚಿವ ಈಶ್ವ‌ರ್ ಖಂಡ್ರೆ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ ಸಾವಿನ ಸಂಖ್ಯೆ 300 ದಾಟ್ಟಿದ್ದು, ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಇನ್ನು ದುರಂತದಲ್ಲಿ ಹಲವು ಕುಟುಂಬಗಳು ಮನೆ, ಮಠ ಕಳೆದುಕೊಂಡು ಕಂಗಲಾಗಿದ್ದಾರೆ.ಅಲ್ಲದೇ ಈಗಾಗಲೇ ಚಿಕ್ಕಮಗಳೂರು, ಹಾಸನ, ಕೊಡಗು ಭಾಗಗಳಲ್ಲಿ ಭೂಕುಸಿತ, ಗುಡ್ಡಕುಸಿತ ಭೀತಿ ಶುರುವಾಗಿದೆ. ಇನ್ನು ವಯನಾಡ್‌ ದುರಂತ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ರೀತಿಯ ಅಭಿಪ್ರಾಯಗಳು ವ್ಯಕ್ತವಾಗಿತ್ತಿವೆ. ಗಿಡ-ಮರಗಳನ್ನು ನಾಶ ಮಾಡಿ ಬಡಾವಣೆ, ರೆಸಾರ್ಟ್, ಹೋಂ ಸ್ಟೇ ನಿರ್ಮಾಣದಿಂದ ಈ ರೀತಿಯ ದುರಂತಗಳು ನಡೆಯುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya

ಶಿರ್ಲಾಲು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಪದಗ್ರಹಣ

Suddi Udaya

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!