ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya

ಬೆಳ್ತಂಗಡಿ : ಆ 02 ಕಾಂಗ್ರೆಸ್‌ ಸರಕಾರದ ಭ್ರಷ್ಟಾಚಾರ ಮತ್ತು ಮುಡಾ ಹಗರಣಗಳ ವಿರುದ್ಧ ಎನ್.ಡಿ.ಎ ನೇತೃತ್ವದಲ್ಲಿ ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತೆರಳಿದೆ.
ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಉಪಾಧ್ಯಕ್ಷರಾದ ಗಣೇಶ್ ಲಾಯಿಲ, ಪ್ರಕಾಶ್ ಬಾರ್ಯ, ಕಾರ್ಯದರ್ಶಿ ಸುಧೀರ್ ಪೂಜಾರಿ ಚಾರ್ಮಾಡಿ, ಗಿರೀಶ್ ಗೌಡ ಬಿ.ಕೆ. ಬಂದಾರು, ಹರೀಶ್ ಗೌಡ ಸoಬೊಲ್ಯ, ಕೋಶಾಧಿಕಾರಿ ಸ್ವಸ್ತಿಕ್ ಹಟತ್ತೋಡಿ ಕುಕ್ಕಳ ಹಾಗೂ ಕಾರ್ಯಕಾರಿಣಿ ಸದಸ್ಯರು ಯುವಮೋರ್ಚಾ ಮಹಾಶಕ್ತಿ ಕೇಂದ್ರ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

error: Content is protected !!