25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರೋಡಿ ಮತ್ತು ಪೆರಾಡಿ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ಎಲ್ಲೆಡೆ ಎಡಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಭೂಕುಸಿತ, ಮರಗಳು ಧರೆಗೆ ಉರುಳಿದ್ದು, ರಸ್ತೆಗಳಿಗೆ ಹಾನಿ, ಕೃಷಿ ನಾಶದಂತಹ ಅನಾಹುತಗಳು ಸಂಭವಿಸಿವೆ.

ಮರೋಡಿ ಗ್ರಾಮದ ಶಾಂತಿ ನಗರದಿಂದ ದೇರಾಜೆ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಸೇತುವೆ ಕೊಚ್ಚಿ ಹೋಗಿ ಸಂಪರ್ಕ ಕಡಿತ, ಕಾಯೇರುಬೈಲು ರಸ್ತೆಯ ರಾಗಿಮೇಲು ಎಂಬಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.

ಪಾಣಾಲು ಸೇತುವೆಗೆ ಹಾನಿ, ಕೋಂಟಡ್ಕ ಎಂಬಲ್ಲಿ ಮೋರಿ ಕುಸಿತ, ಉಳಗುಡ್ಡೆ ಎಂಬಲ್ಲಿ ಮರಬಿದ್ದು ವಿದ್ಯುತ್ ಲೈನಿಗೆ ಹಾನಿ, ಕಲ್ಲಟ್ಟ ಎಂಬಲ್ಲಿ ಕಾಲುಸಂಖ ಕೊಚ್ಚಿ ಹೋಗಿ ಸಂಪರ್ಕ ಕಡಿತ, ಪೆರಾಡಿ ಗ್ರಾಮದ ಬೀರೊಟ್ಟು ಎಂಬಲ್ಲಿ ರಸ್ತೆಯ ತಡೆಗೋಡೆ ಕೊಚ್ಚಿ ಹೋಗಿದ್ದು, ನೆಲ್ಲಿಂಗೇರಿ ಕ್ರಾಸ್ ಬಳಿ ರಸ್ತೆ ಸಂಚಾರಕ್ಕೆ ಅಡಚಣೆಯಂತಹ ಪ್ರದೇಶಗಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾಕರ್ ಬುಣ್ಣಾನ್, ಪಿಡಿಒ ಆಶಾಲತಾ ಎಚ್, ಸದಸ್ಯರಾದ ಪದ್ಮಶ್ರೀ ಜೈನ್, ಅಶೋಕ ಪೂಜಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಂಡರು.

Related posts

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya
error: Content is protected !!