22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರೋಡಿ ಮತ್ತು ಪೆರಾಡಿ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ಎಲ್ಲೆಡೆ ಎಡಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಭೂಕುಸಿತ, ಮರಗಳು ಧರೆಗೆ ಉರುಳಿದ್ದು, ರಸ್ತೆಗಳಿಗೆ ಹಾನಿ, ಕೃಷಿ ನಾಶದಂತಹ ಅನಾಹುತಗಳು ಸಂಭವಿಸಿವೆ.

ಮರೋಡಿ ಗ್ರಾಮದ ಶಾಂತಿ ನಗರದಿಂದ ದೇರಾಜೆ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಸೇತುವೆ ಕೊಚ್ಚಿ ಹೋಗಿ ಸಂಪರ್ಕ ಕಡಿತ, ಕಾಯೇರುಬೈಲು ರಸ್ತೆಯ ರಾಗಿಮೇಲು ಎಂಬಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.

ಪಾಣಾಲು ಸೇತುವೆಗೆ ಹಾನಿ, ಕೋಂಟಡ್ಕ ಎಂಬಲ್ಲಿ ಮೋರಿ ಕುಸಿತ, ಉಳಗುಡ್ಡೆ ಎಂಬಲ್ಲಿ ಮರಬಿದ್ದು ವಿದ್ಯುತ್ ಲೈನಿಗೆ ಹಾನಿ, ಕಲ್ಲಟ್ಟ ಎಂಬಲ್ಲಿ ಕಾಲುಸಂಖ ಕೊಚ್ಚಿ ಹೋಗಿ ಸಂಪರ್ಕ ಕಡಿತ, ಪೆರಾಡಿ ಗ್ರಾಮದ ಬೀರೊಟ್ಟು ಎಂಬಲ್ಲಿ ರಸ್ತೆಯ ತಡೆಗೋಡೆ ಕೊಚ್ಚಿ ಹೋಗಿದ್ದು, ನೆಲ್ಲಿಂಗೇರಿ ಕ್ರಾಸ್ ಬಳಿ ರಸ್ತೆ ಸಂಚಾರಕ್ಕೆ ಅಡಚಣೆಯಂತಹ ಪ್ರದೇಶಗಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾಕರ್ ಬುಣ್ಣಾನ್, ಪಿಡಿಒ ಆಶಾಲತಾ ಎಚ್, ಸದಸ್ಯರಾದ ಪದ್ಮಶ್ರೀ ಜೈನ್, ಅಶೋಕ ಪೂಜಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಂಡರು.

Related posts

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!