25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

ಮುಂಡಾಜೆ ಗ್ರಾಮದ ಸೋಮಂತಡ್ಕ ಮಜಲು ರಸ್ತೆ ನಡೆದು ಹೋಗಲು ಅಸಾಧ್ಯವಾದ ರಸ್ತೆಯಾಗಿ ಪರಿಣಮಿಸಿದೆ.

ಆ.1 ರಂದು ವಾಹನಗಳು ಈ ರಸ್ತೆಯಲ್ಲಿ ಸಿಲುಕಿಕೊಂಡು ಸಾರ್ವಜನಿಕರ ಸಹಕಾರದಿಂದ ಮೇಲೆತ್ತಲಾಯಿತು. ನಂತರ ಗ್ರಾಮ ಪಂಚಾಯತ್ ಸದಸ್ಯೆ ದಿಶಾ ದಿನೇಶ ಪಟವರ್ಧನ್ ಅವರ ನೇತೃತ್ವದಲ್ಲಿ ಸ್ಥಳೀಯರು ಸೇರಿ ಎರಡು ಲೋಡು ಚರಲು ಹಾಕಲಾಯಿತು.

ರಸ್ತೆಯ ಇಕ್ಕಲಗಳಲ್ಲಿ ಕಾಲುವೆಗಳು ಕಸದಿಂದ ತುಂಬಿದ್ದು, ಏಪ್ರಿಲ್ -ಮೇ ತಿಂಗಳಲ್ಲಿ ಗ್ರಾಮ ಪಂಚಾಯತ್ ಸರಿಯಾದ ಕಾಮಗಾರಿ ನಡೆಸದೆ ಇದ್ದುದರಿಂದ ಈ ರೀತಿಯಾಗಿದೆ ಎಂದು ಸ್ಥಳೀಯರು ದೂರಿಕೊಂಡಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ರಬ್ಬರ್ ತೋಟಗಳಿದ್ದು ಮರದ ಗೆಲ್ಲುಗಳು ರಸ್ತೆಗೆ ಬಿದ್ದು ರಸ್ತೆ ಸಂಪೂರ್ಣ ಹಾಳಾಗಿದೆ.

ಸುಮಾರು 20 ವರ್ಷಗಳ ಹಿಂದೆ ಈ ರಸ್ತೆಗೆ ಡಾಮರೀಕರಣವಾಗಿದ್ದು ನಂತರ ಯಾವುದೇ ಕಾಮಗಾರಿ ನಡೆದಿಲ್ಲ. ಮಳೆಗಾಲದಲ್ಲಿ ಬಿಡಿ, ಬೇಸಿಗೆಯಲ್ಲೂ ನಡೆದು ಹೋಗಲು ಕಷ್ಟವಾಗುತ್ತಿದ್ದು, ನೂರಾರು ವಿದ್ಯಾರ್ಥಿಗಳು ಇದೇ ರಸ್ತೆಯಲ್ಲಿ ಶಾಲೆಗೆ ನಡೆದು ಬರುತ್ತಿದ್ದಾರೆ. ಮುಂಡಾಜೆ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಮುಖ್ಯ ರಸ್ತೆಯಾಗಿ ಇರುವ ಈ ದಾರಿ ಸರಿಯಾಗಲು ಇನ್ನೆಷ್ಟು ಸಮಯ ಕಾಯಬೇಕೋ ಎಂದು ಸ್ಥಳೀಯರು ಹಿಡಿ ಶಾಪ ಹಾಕುತ್ತಿದ್ದಾರೆ.

ಈ ಹಿಂದೆ ಹಲವಾರು ಬಾರಿ ಮಜಲು ವಾಳ್ಯದ ಮಂದಿ ಶ್ರಮದಾನದ ಮೂಲಕ ಈ ರಸ್ತೆಯ ಕಲ್ಲು ಹೆಕ್ಕುವ, ಕಾಲುವೆಯನ್ನು ದುರಸ್ತಿಗೊಳಿಸುವ ಕಾರ್ಯ ಮಾಡಿದ್ದರು. ಈ ವರ್ಷದ ಮಳೆಗೆ ಎಲ್ಲವೂ ಕೊಚ್ಚಿ ಹೋಗಿದೆ. ಈ ಮಳೆಗಾಲವಂತು ಈ ರಸ್ತೆಗೆ ದ್ವಿಚಕ್ರ ವಾಹನವೂ ಸೇರಿದಂತೆ ಯಾವುದೇ ವಾಹನ ಸಂಚಾರ ಅಸಾಧ್ಯದ ಮಾತು. ಮುಂದಿನ ದಿನಗಳಲ್ಲಾದರೂ ಕಾಂಕ್ರೀಟೀಕರಣವಾಗಲಿ ಎನ್ನುವುದು ಸ್ಥಳೀಯರ ಆಶಯ. ಈ ಪ್ರದೇಶದ ಮತದಾರರು ಮತದಾನ ಬಹಿಷ್ಕರಿಸುವ ಬೆದರಿಕೆ ಹಾಕಿದ್ದರು. ಆಗ ರಾಜಕಾರಣಿಗಳು ಸರಿಪಡಿಸುವ ಆಶ್ವಾಸನೆ ನೀಡಿದ್ದರು. ಆದರೆ ನಂತರ ಎಲ್ಲರೂ ಮರೆತು ಹೋಗಿದೆ.
ಆದಷ್ಟು ಬೇಗ ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತಾಗಲಿ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ನಾಲ್ಕೂರು: ಅನಾರೋಗ್ಯದಿಂದ ಸುಶೀಲ ಜೈಮಾತಾ ನಿಧನ

Suddi Udaya
error: Content is protected !!