23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿ ಹಳೆ ಪೇಟೆಯ ಸರಕಾರಿ ಹಿ. ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಸೇವೆಗೆ ಸೇರ್ಪಡೆಗೊಂಡು, ಸುದೀರ್ಘ ಮೂವತ್ತು ವರ್ಷಗಳ ಸೇವೆಯ ನಂತರ ಜುಲೈ 31ರಂದು ವಿದಾಯ ಹೇಳಿದ ಜೋನ್ ಕೆ ಪಿ ಅವರನ್ನು, ಗೋಳಿತಟ್ಟು ಉನ್ನತಿಕರಿಸಿದ ಹಿ. ಪ್ರಾಥಮಿಕ ಶಾಲೆಯಿಂದ ನಿವೃತ್ತಿ ಪಡೆದ ಅವರನ್ನು, ಅವರ ಸ್ವಗೃಹದಲ್ಲಿ ಹಿರಿಯರ, ವೃತ್ತಿ ಬಾಂಧವರ, ನಾಡಿನ ಪ್ರಮುಖ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಸಂತ ಅಲ್ಫೋನ್ಸ ಚರ್ಚ್‌ನ ಧರ್ಮಗುರು ವಂದನೀಯ ಶಾಜಿ ಮಾತ್ಯು ಅವರ ಸೇವೆಯನ್ನು ಪ್ರಶಂಸಿಸಿ ಮಾತನಾಡಿದರು. ದೇಶದ ಇತಿಹಾಸದಲ್ಲಿ ಪ್ರಥಮ ಬಾರಿಗೆ, ವಿದಾಯದ ಸಂದರ್ಭದಲ್ಲಿ, ಶಿಕ್ಷಕರೊಬ್ಬರು ರಾಷ್ಟ್ರಪಿತ ಮಹಾತ್ಮ ಗಾಂಧಿಯ ಪುತ್ತಳಿಕೆಯನ್ನು ಸಾವಿರಾರು ರೂಪಾಯಿ ವೆಚ್ಚದಲ್ಲಿ ನಿರ್ಮಿಸಿ ಶಾಲಾ ವಠಾರದಲ್ಲಿ ಸ್ಥಾಪನೆ ಮಾಡಿರುವುದು, ಎಲ್ಲಾ ಸರಕಾರಿ ನೌಕರರಿಗೆ ಹೊಸದೊಂದು ಪರಿಕಲ್ಪನೆಗೆ ನಾಂದಿಯಾಗಿರುವುದು ಜೋನ್ ಕೆ ಪಿ ಅವರ ವಿಶೇಷ ಸಾಧನೆಯಾಗಿದೆ ಮತ್ತು ಅನುಕರಣೀಯ ಮಾದರಿಯಾಗಿದೆ.

ಈ ಸಂದರ್ಭದಲ್ಲಿ ಚರ್ಚ್‌ನ ಟ್ರಸ್ಟಿಗಳಾದ ನಿವೃತ್ತ ಸೈನಿಕ ಅಲೆಕ್ಸ್, ಪಾಲನ ಸಮಿತಿಯ ಜಿನೋಯ್ ಜಾರ್ಜ್, ಭಗೀನಿಯರಾದ ವಂದನೀಯ ಲಿಸ್ ಮಾತ್ಯು, ವಂದನೀಯ ಎಲ್ ಸ್ಲೀಟ್, ಹಿರಿಯ ಮುಖಂಡ ಕೆ ಪಿ ತೋಮಸ್, ವಂದನೀಯ ಫಾ. ಜಿಬಿನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಧರ್ಮಸ್ಥಳ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya
error: Content is protected !!