23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿ ಹಳೆ ಪೇಟೆಯ ಸರಕಾರಿ ಹಿ. ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಸೇವೆಗೆ ಸೇರ್ಪಡೆಗೊಂಡು, ಸುದೀರ್ಘ ಮೂವತ್ತು ವರ್ಷಗಳ ಸೇವೆಯ ನಂತರ ಜುಲೈ 31ರಂದು ವಿದಾಯ ಹೇಳಿದ ಜೋನ್ ಕೆ ಪಿ ಅವರನ್ನು, ಗೋಳಿತಟ್ಟು ಉನ್ನತಿಕರಿಸಿದ ಹಿ. ಪ್ರಾಥಮಿಕ ಶಾಲೆಯಿಂದ ನಿವೃತ್ತಿ ಪಡೆದ ಅವರನ್ನು, ಅವರ ಸ್ವಗೃಹದಲ್ಲಿ ಹಿರಿಯರ, ವೃತ್ತಿ ಬಾಂಧವರ, ನಾಡಿನ ಪ್ರಮುಖ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಸಂತ ಅಲ್ಫೋನ್ಸ ಚರ್ಚ್‌ನ ಧರ್ಮಗುರು ವಂದನೀಯ ಶಾಜಿ ಮಾತ್ಯು ಅವರ ಸೇವೆಯನ್ನು ಪ್ರಶಂಸಿಸಿ ಮಾತನಾಡಿದರು. ದೇಶದ ಇತಿಹಾಸದಲ್ಲಿ ಪ್ರಥಮ ಬಾರಿಗೆ, ವಿದಾಯದ ಸಂದರ್ಭದಲ್ಲಿ, ಶಿಕ್ಷಕರೊಬ್ಬರು ರಾಷ್ಟ್ರಪಿತ ಮಹಾತ್ಮ ಗಾಂಧಿಯ ಪುತ್ತಳಿಕೆಯನ್ನು ಸಾವಿರಾರು ರೂಪಾಯಿ ವೆಚ್ಚದಲ್ಲಿ ನಿರ್ಮಿಸಿ ಶಾಲಾ ವಠಾರದಲ್ಲಿ ಸ್ಥಾಪನೆ ಮಾಡಿರುವುದು, ಎಲ್ಲಾ ಸರಕಾರಿ ನೌಕರರಿಗೆ ಹೊಸದೊಂದು ಪರಿಕಲ್ಪನೆಗೆ ನಾಂದಿಯಾಗಿರುವುದು ಜೋನ್ ಕೆ ಪಿ ಅವರ ವಿಶೇಷ ಸಾಧನೆಯಾಗಿದೆ ಮತ್ತು ಅನುಕರಣೀಯ ಮಾದರಿಯಾಗಿದೆ.

ಈ ಸಂದರ್ಭದಲ್ಲಿ ಚರ್ಚ್‌ನ ಟ್ರಸ್ಟಿಗಳಾದ ನಿವೃತ್ತ ಸೈನಿಕ ಅಲೆಕ್ಸ್, ಪಾಲನ ಸಮಿತಿಯ ಜಿನೋಯ್ ಜಾರ್ಜ್, ಭಗೀನಿಯರಾದ ವಂದನೀಯ ಲಿಸ್ ಮಾತ್ಯು, ವಂದನೀಯ ಎಲ್ ಸ್ಲೀಟ್, ಹಿರಿಯ ಮುಖಂಡ ಕೆ ಪಿ ತೋಮಸ್, ವಂದನೀಯ ಫಾ. ಜಿಬಿನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜಿನ ಸಹಯೋಗದಲ್ಲಿ ಡಿಪ್ಲೋಮಾ ಹಾಗೂ ವೃತ್ತಿಪರ ಶಿಕ್ಷಣದ ತರಗತಿಗಳ ಆರಂಭೋತ್ಸವ

Suddi Udaya

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಸಿಯಾಳ ಅಭಿಷೇಕ

Suddi Udaya

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!