April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿ ಹಳೆ ಪೇಟೆಯ ಸರಕಾರಿ ಹಿ. ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಸೇವೆಗೆ ಸೇರ್ಪಡೆಗೊಂಡು, ಸುದೀರ್ಘ ಮೂವತ್ತು ವರ್ಷಗಳ ಸೇವೆಯ ನಂತರ ಜುಲೈ 31ರಂದು ವಿದಾಯ ಹೇಳಿದ ಜೋನ್ ಕೆ ಪಿ ಅವರನ್ನು, ಗೋಳಿತಟ್ಟು ಉನ್ನತಿಕರಿಸಿದ ಹಿ. ಪ್ರಾಥಮಿಕ ಶಾಲೆಯಿಂದ ನಿವೃತ್ತಿ ಪಡೆದ ಅವರನ್ನು, ಅವರ ಸ್ವಗೃಹದಲ್ಲಿ ಹಿರಿಯರ, ವೃತ್ತಿ ಬಾಂಧವರ, ನಾಡಿನ ಪ್ರಮುಖ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಸಂತ ಅಲ್ಫೋನ್ಸ ಚರ್ಚ್‌ನ ಧರ್ಮಗುರು ವಂದನೀಯ ಶಾಜಿ ಮಾತ್ಯು ಅವರ ಸೇವೆಯನ್ನು ಪ್ರಶಂಸಿಸಿ ಮಾತನಾಡಿದರು. ದೇಶದ ಇತಿಹಾಸದಲ್ಲಿ ಪ್ರಥಮ ಬಾರಿಗೆ, ವಿದಾಯದ ಸಂದರ್ಭದಲ್ಲಿ, ಶಿಕ್ಷಕರೊಬ್ಬರು ರಾಷ್ಟ್ರಪಿತ ಮಹಾತ್ಮ ಗಾಂಧಿಯ ಪುತ್ತಳಿಕೆಯನ್ನು ಸಾವಿರಾರು ರೂಪಾಯಿ ವೆಚ್ಚದಲ್ಲಿ ನಿರ್ಮಿಸಿ ಶಾಲಾ ವಠಾರದಲ್ಲಿ ಸ್ಥಾಪನೆ ಮಾಡಿರುವುದು, ಎಲ್ಲಾ ಸರಕಾರಿ ನೌಕರರಿಗೆ ಹೊಸದೊಂದು ಪರಿಕಲ್ಪನೆಗೆ ನಾಂದಿಯಾಗಿರುವುದು ಜೋನ್ ಕೆ ಪಿ ಅವರ ವಿಶೇಷ ಸಾಧನೆಯಾಗಿದೆ ಮತ್ತು ಅನುಕರಣೀಯ ಮಾದರಿಯಾಗಿದೆ.

ಈ ಸಂದರ್ಭದಲ್ಲಿ ಚರ್ಚ್‌ನ ಟ್ರಸ್ಟಿಗಳಾದ ನಿವೃತ್ತ ಸೈನಿಕ ಅಲೆಕ್ಸ್, ಪಾಲನ ಸಮಿತಿಯ ಜಿನೋಯ್ ಜಾರ್ಜ್, ಭಗೀನಿಯರಾದ ವಂದನೀಯ ಲಿಸ್ ಮಾತ್ಯು, ವಂದನೀಯ ಎಲ್ ಸ್ಲೀಟ್, ಹಿರಿಯ ಮುಖಂಡ ಕೆ ಪಿ ತೋಮಸ್, ವಂದನೀಯ ಫಾ. ಜಿಬಿನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya
error: Content is protected !!