25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿ ಹಳೆ ಪೇಟೆಯ ಸರಕಾರಿ ಹಿ. ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಸೇವೆಗೆ ಸೇರ್ಪಡೆಗೊಂಡು, ಸುದೀರ್ಘ ಮೂವತ್ತು ವರ್ಷಗಳ ಸೇವೆಯ ನಂತರ ಜುಲೈ 31ರಂದು ವಿದಾಯ ಹೇಳಿದ ಜೋನ್ ಕೆ ಪಿ ಅವರನ್ನು, ಗೋಳಿತಟ್ಟು ಉನ್ನತಿಕರಿಸಿದ ಹಿ. ಪ್ರಾಥಮಿಕ ಶಾಲೆಯಿಂದ ನಿವೃತ್ತಿ ಪಡೆದ ಅವರನ್ನು, ಅವರ ಸ್ವಗೃಹದಲ್ಲಿ ಹಿರಿಯರ, ವೃತ್ತಿ ಬಾಂಧವರ, ನಾಡಿನ ಪ್ರಮುಖ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಸಂತ ಅಲ್ಫೋನ್ಸ ಚರ್ಚ್‌ನ ಧರ್ಮಗುರು ವಂದನೀಯ ಶಾಜಿ ಮಾತ್ಯು ಅವರ ಸೇವೆಯನ್ನು ಪ್ರಶಂಸಿಸಿ ಮಾತನಾಡಿದರು. ದೇಶದ ಇತಿಹಾಸದಲ್ಲಿ ಪ್ರಥಮ ಬಾರಿಗೆ, ವಿದಾಯದ ಸಂದರ್ಭದಲ್ಲಿ, ಶಿಕ್ಷಕರೊಬ್ಬರು ರಾಷ್ಟ್ರಪಿತ ಮಹಾತ್ಮ ಗಾಂಧಿಯ ಪುತ್ತಳಿಕೆಯನ್ನು ಸಾವಿರಾರು ರೂಪಾಯಿ ವೆಚ್ಚದಲ್ಲಿ ನಿರ್ಮಿಸಿ ಶಾಲಾ ವಠಾರದಲ್ಲಿ ಸ್ಥಾಪನೆ ಮಾಡಿರುವುದು, ಎಲ್ಲಾ ಸರಕಾರಿ ನೌಕರರಿಗೆ ಹೊಸದೊಂದು ಪರಿಕಲ್ಪನೆಗೆ ನಾಂದಿಯಾಗಿರುವುದು ಜೋನ್ ಕೆ ಪಿ ಅವರ ವಿಶೇಷ ಸಾಧನೆಯಾಗಿದೆ ಮತ್ತು ಅನುಕರಣೀಯ ಮಾದರಿಯಾಗಿದೆ.

ಈ ಸಂದರ್ಭದಲ್ಲಿ ಚರ್ಚ್‌ನ ಟ್ರಸ್ಟಿಗಳಾದ ನಿವೃತ್ತ ಸೈನಿಕ ಅಲೆಕ್ಸ್, ಪಾಲನ ಸಮಿತಿಯ ಜಿನೋಯ್ ಜಾರ್ಜ್, ಭಗೀನಿಯರಾದ ವಂದನೀಯ ಲಿಸ್ ಮಾತ್ಯು, ವಂದನೀಯ ಎಲ್ ಸ್ಲೀಟ್, ಹಿರಿಯ ಮುಖಂಡ ಕೆ ಪಿ ತೋಮಸ್, ವಂದನೀಯ ಫಾ. ಜಿಬಿನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಮಾ.8: ಗುರುವಾಯನಕೆರೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಭಾರತೀಯರ ಹೃದಯ ಸಾಮ್ರಾಟ್ “ಛತ್ರಪತಿ ಶಿವಾಜಿ” ಪ್ರಥಮ ನಾಟಕ : ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನ

Suddi Udaya
error: Content is protected !!