23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿ ಹಳೆ ಪೇಟೆಯ ಸರಕಾರಿ ಹಿ. ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಸೇವೆಗೆ ಸೇರ್ಪಡೆಗೊಂಡು, ಸುದೀರ್ಘ ಮೂವತ್ತು ವರ್ಷಗಳ ಸೇವೆಯ ನಂತರ ಜುಲೈ 31ರಂದು ವಿದಾಯ ಹೇಳಿದ ಜೋನ್ ಕೆ ಪಿ ಅವರನ್ನು, ಗೋಳಿತಟ್ಟು ಉನ್ನತಿಕರಿಸಿದ ಹಿ. ಪ್ರಾಥಮಿಕ ಶಾಲೆಯಿಂದ ನಿವೃತ್ತಿ ಪಡೆದ ಅವರನ್ನು, ಅವರ ಸ್ವಗೃಹದಲ್ಲಿ ಹಿರಿಯರ, ವೃತ್ತಿ ಬಾಂಧವರ, ನಾಡಿನ ಪ್ರಮುಖ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಸಂತ ಅಲ್ಫೋನ್ಸ ಚರ್ಚ್‌ನ ಧರ್ಮಗುರು ವಂದನೀಯ ಶಾಜಿ ಮಾತ್ಯು ಅವರ ಸೇವೆಯನ್ನು ಪ್ರಶಂಸಿಸಿ ಮಾತನಾಡಿದರು. ದೇಶದ ಇತಿಹಾಸದಲ್ಲಿ ಪ್ರಥಮ ಬಾರಿಗೆ, ವಿದಾಯದ ಸಂದರ್ಭದಲ್ಲಿ, ಶಿಕ್ಷಕರೊಬ್ಬರು ರಾಷ್ಟ್ರಪಿತ ಮಹಾತ್ಮ ಗಾಂಧಿಯ ಪುತ್ತಳಿಕೆಯನ್ನು ಸಾವಿರಾರು ರೂಪಾಯಿ ವೆಚ್ಚದಲ್ಲಿ ನಿರ್ಮಿಸಿ ಶಾಲಾ ವಠಾರದಲ್ಲಿ ಸ್ಥಾಪನೆ ಮಾಡಿರುವುದು, ಎಲ್ಲಾ ಸರಕಾರಿ ನೌಕರರಿಗೆ ಹೊಸದೊಂದು ಪರಿಕಲ್ಪನೆಗೆ ನಾಂದಿಯಾಗಿರುವುದು ಜೋನ್ ಕೆ ಪಿ ಅವರ ವಿಶೇಷ ಸಾಧನೆಯಾಗಿದೆ ಮತ್ತು ಅನುಕರಣೀಯ ಮಾದರಿಯಾಗಿದೆ.

ಈ ಸಂದರ್ಭದಲ್ಲಿ ಚರ್ಚ್‌ನ ಟ್ರಸ್ಟಿಗಳಾದ ನಿವೃತ್ತ ಸೈನಿಕ ಅಲೆಕ್ಸ್, ಪಾಲನ ಸಮಿತಿಯ ಜಿನೋಯ್ ಜಾರ್ಜ್, ಭಗೀನಿಯರಾದ ವಂದನೀಯ ಲಿಸ್ ಮಾತ್ಯು, ವಂದನೀಯ ಎಲ್ ಸ್ಲೀಟ್, ಹಿರಿಯ ಮುಖಂಡ ಕೆ ಪಿ ತೋಮಸ್, ವಂದನೀಯ ಫಾ. ಜಿಬಿನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಜಾತ್ರೆ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

Suddi Udaya
error: Content is protected !!