26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿ ಹಳೆ ಪೇಟೆಯ ಸರಕಾರಿ ಹಿ. ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಸೇವೆಗೆ ಸೇರ್ಪಡೆಗೊಂಡು, ಸುದೀರ್ಘ ಮೂವತ್ತು ವರ್ಷಗಳ ಸೇವೆಯ ನಂತರ ಜುಲೈ 31ರಂದು ವಿದಾಯ ಹೇಳಿದ ಜೋನ್ ಕೆ ಪಿ ಅವರನ್ನು, ಗೋಳಿತಟ್ಟು ಉನ್ನತಿಕರಿಸಿದ ಹಿ. ಪ್ರಾಥಮಿಕ ಶಾಲೆಯಿಂದ ನಿವೃತ್ತಿ ಪಡೆದ ಅವರನ್ನು, ಅವರ ಸ್ವಗೃಹದಲ್ಲಿ ಹಿರಿಯರ, ವೃತ್ತಿ ಬಾಂಧವರ, ನಾಡಿನ ಪ್ರಮುಖ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಸಂತ ಅಲ್ಫೋನ್ಸ ಚರ್ಚ್‌ನ ಧರ್ಮಗುರು ವಂದನೀಯ ಶಾಜಿ ಮಾತ್ಯು ಅವರ ಸೇವೆಯನ್ನು ಪ್ರಶಂಸಿಸಿ ಮಾತನಾಡಿದರು. ದೇಶದ ಇತಿಹಾಸದಲ್ಲಿ ಪ್ರಥಮ ಬಾರಿಗೆ, ವಿದಾಯದ ಸಂದರ್ಭದಲ್ಲಿ, ಶಿಕ್ಷಕರೊಬ್ಬರು ರಾಷ್ಟ್ರಪಿತ ಮಹಾತ್ಮ ಗಾಂಧಿಯ ಪುತ್ತಳಿಕೆಯನ್ನು ಸಾವಿರಾರು ರೂಪಾಯಿ ವೆಚ್ಚದಲ್ಲಿ ನಿರ್ಮಿಸಿ ಶಾಲಾ ವಠಾರದಲ್ಲಿ ಸ್ಥಾಪನೆ ಮಾಡಿರುವುದು, ಎಲ್ಲಾ ಸರಕಾರಿ ನೌಕರರಿಗೆ ಹೊಸದೊಂದು ಪರಿಕಲ್ಪನೆಗೆ ನಾಂದಿಯಾಗಿರುವುದು ಜೋನ್ ಕೆ ಪಿ ಅವರ ವಿಶೇಷ ಸಾಧನೆಯಾಗಿದೆ ಮತ್ತು ಅನುಕರಣೀಯ ಮಾದರಿಯಾಗಿದೆ.

ಈ ಸಂದರ್ಭದಲ್ಲಿ ಚರ್ಚ್‌ನ ಟ್ರಸ್ಟಿಗಳಾದ ನಿವೃತ್ತ ಸೈನಿಕ ಅಲೆಕ್ಸ್, ಪಾಲನ ಸಮಿತಿಯ ಜಿನೋಯ್ ಜಾರ್ಜ್, ಭಗೀನಿಯರಾದ ವಂದನೀಯ ಲಿಸ್ ಮಾತ್ಯು, ವಂದನೀಯ ಎಲ್ ಸ್ಲೀಟ್, ಹಿರಿಯ ಮುಖಂಡ ಕೆ ಪಿ ತೋಮಸ್, ವಂದನೀಯ ಫಾ. ಜಿಬಿನ್ ಮೊದಲಾದವರು ಉಪಸ್ಥಿತರಿದ್ದರು.

Related posts

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya
error: Content is protected !!