22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿ ಹಳೆ ಪೇಟೆಯ ಸರಕಾರಿ ಹಿ. ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಸೇವೆಗೆ ಸೇರ್ಪಡೆಗೊಂಡು, ಸುದೀರ್ಘ ಮೂವತ್ತು ವರ್ಷಗಳ ಸೇವೆಯ ನಂತರ ಜುಲೈ 31ರಂದು ವಿದಾಯ ಹೇಳಿದ ಜೋನ್ ಕೆ ಪಿ ಅವರನ್ನು, ಗೋಳಿತಟ್ಟು ಉನ್ನತಿಕರಿಸಿದ ಹಿ. ಪ್ರಾಥಮಿಕ ಶಾಲೆಯಿಂದ ನಿವೃತ್ತಿ ಪಡೆದ ಅವರನ್ನು, ಅವರ ಸ್ವಗೃಹದಲ್ಲಿ ಹಿರಿಯರ, ವೃತ್ತಿ ಬಾಂಧವರ, ನಾಡಿನ ಪ್ರಮುಖ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಸಂತ ಅಲ್ಫೋನ್ಸ ಚರ್ಚ್‌ನ ಧರ್ಮಗುರು ವಂದನೀಯ ಶಾಜಿ ಮಾತ್ಯು ಅವರ ಸೇವೆಯನ್ನು ಪ್ರಶಂಸಿಸಿ ಮಾತನಾಡಿದರು. ದೇಶದ ಇತಿಹಾಸದಲ್ಲಿ ಪ್ರಥಮ ಬಾರಿಗೆ, ವಿದಾಯದ ಸಂದರ್ಭದಲ್ಲಿ, ಶಿಕ್ಷಕರೊಬ್ಬರು ರಾಷ್ಟ್ರಪಿತ ಮಹಾತ್ಮ ಗಾಂಧಿಯ ಪುತ್ತಳಿಕೆಯನ್ನು ಸಾವಿರಾರು ರೂಪಾಯಿ ವೆಚ್ಚದಲ್ಲಿ ನಿರ್ಮಿಸಿ ಶಾಲಾ ವಠಾರದಲ್ಲಿ ಸ್ಥಾಪನೆ ಮಾಡಿರುವುದು, ಎಲ್ಲಾ ಸರಕಾರಿ ನೌಕರರಿಗೆ ಹೊಸದೊಂದು ಪರಿಕಲ್ಪನೆಗೆ ನಾಂದಿಯಾಗಿರುವುದು ಜೋನ್ ಕೆ ಪಿ ಅವರ ವಿಶೇಷ ಸಾಧನೆಯಾಗಿದೆ ಮತ್ತು ಅನುಕರಣೀಯ ಮಾದರಿಯಾಗಿದೆ.

ಈ ಸಂದರ್ಭದಲ್ಲಿ ಚರ್ಚ್‌ನ ಟ್ರಸ್ಟಿಗಳಾದ ನಿವೃತ್ತ ಸೈನಿಕ ಅಲೆಕ್ಸ್, ಪಾಲನ ಸಮಿತಿಯ ಜಿನೋಯ್ ಜಾರ್ಜ್, ಭಗೀನಿಯರಾದ ವಂದನೀಯ ಲಿಸ್ ಮಾತ್ಯು, ವಂದನೀಯ ಎಲ್ ಸ್ಲೀಟ್, ಹಿರಿಯ ಮುಖಂಡ ಕೆ ಪಿ ತೋಮಸ್, ವಂದನೀಯ ಫಾ. ಜಿಬಿನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

Suddi Udaya
error: Content is protected !!