July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

ಅಳದಂಗಡಿ: ಕಳೆದ ಕೆಲ ದಿನಗಳಿಂದ ಧಾರಕಾರವಾಗಿ ಸುರಿದ ಮಳೆ ನೀರು ಸರಾಗವಾಗಿ ಹರಿಯದೆ ಕೊಡಂಗೆ ದೈಲಬೈಲು ತೋಡು ಕುಸಿದು ಹಲವರ ಕೃಷಿ ಭೂಮಿ ಮುಳುಗಡೆಯಾಗಿದೆ.

ಕಳೆದ ಹಲವು ವರ್ಷಗಳಿಂದ ಕೊಡಂಗೆ ದೈಲಬೈಲು ತೋಡು ಕುಸಿದು ಮಳೆ ನೀರು ಈ ಭಾಗದ ಸಂಜೀವ ಪೂಜಾರಿ ಕೊಡಂಗೆ, ಅಲೋಶಿಯಸ್ ಡಿಸೋಜ, ಎಲ್ವಿಸ್ ವಾಸ್ ಹಾಗೂ ಸುಮಾರು 10 ರೈತರ ತೋಟಗಳಿಗೆ ನೀರು ತುಂಬಿ ಕೃಷಿ ಭೂಮಿ ಮುಳುಗಡೆಯಾಗಿ ನಷ್ಟವಾಗಿದೆ.

ಕೃಷಿಕರ ಸಂಕಷ್ಟ ಕೇಳುವವರೇ ಇಲ್ಲ

ಕಳೆದ 3 ವರ್ಷದಿಂದ ನಮಗೆ ಮಳೆಗಾಲದಲ್ಲಿ ಸಮಸ್ಯೆ ಎದುರಾಗುತ್ತಿದೆ. ಈ ಭಾಗದ ತೋಟದಲ್ಲಿ ಪ್ರತಿ ವರ್ಷ ಅಡಿಕೆ ಮರಗಳು ಕೊಳೆ ರೋಗಕ್ಕೆ ತುತ್ತಾಗುತ್ತಿವೆ. ಇಲ್ಲಿ ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು. ಸಂಬಂಧಪಟ್ಟವರು ಶೀಘ್ರವೇ ಎಚ್ಚೆತ್ತುಕೊಂಡು ಈ ಸಮಸ್ಯೆಯನ್ನು ಬಗೆಹರಿಸಿ ಈ ಭಾಗದ ಕೃಷಿಕರನ್ನು ಸಂಕಷ್ಟದಿಂದ ಪಾರು ಮಾಡಬೇಕಾಗಿದೆ ಎಂದು ಸಂಜೀವ ಪೂಜಾರಿ ಕೊಡಂಗೆ ತಿಳಿಸಿದರು.

Related posts

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ವತಿಯಿಂದ ಪರಿಸರ ಪಾಠ ಹಾಗೂ ಸಾಲುಮರದ ತಿಮ್ಮಕ್ಕ ರವರಿಗೆ ನುಡಿನಮನ

Suddi Udaya

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!