September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

ಅಳದಂಗಡಿ: ಕಳೆದ ಕೆಲ ದಿನಗಳಿಂದ ಧಾರಕಾರವಾಗಿ ಸುರಿದ ಮಳೆ ನೀರು ಸರಾಗವಾಗಿ ಹರಿಯದೆ ಕೊಡಂಗೆ ದೈಲಬೈಲು ತೋಡು ಕುಸಿದು ಹಲವರ ಕೃಷಿ ಭೂಮಿ ಮುಳುಗಡೆಯಾಗಿದೆ.

ಕಳೆದ ಹಲವು ವರ್ಷಗಳಿಂದ ಕೊಡಂಗೆ ದೈಲಬೈಲು ತೋಡು ಕುಸಿದು ಮಳೆ ನೀರು ಈ ಭಾಗದ ಸಂಜೀವ ಪೂಜಾರಿ ಕೊಡಂಗೆ, ಅಲೋಶಿಯಸ್ ಡಿಸೋಜ, ಎಲ್ವಿಸ್ ವಾಸ್ ಹಾಗೂ ಸುಮಾರು 10 ರೈತರ ತೋಟಗಳಿಗೆ ನೀರು ತುಂಬಿ ಕೃಷಿ ಭೂಮಿ ಮುಳುಗಡೆಯಾಗಿ ನಷ್ಟವಾಗಿದೆ.

ಕೃಷಿಕರ ಸಂಕಷ್ಟ ಕೇಳುವವರೇ ಇಲ್ಲ

ಕಳೆದ 3 ವರ್ಷದಿಂದ ನಮಗೆ ಮಳೆಗಾಲದಲ್ಲಿ ಸಮಸ್ಯೆ ಎದುರಾಗುತ್ತಿದೆ. ಈ ಭಾಗದ ತೋಟದಲ್ಲಿ ಪ್ರತಿ ವರ್ಷ ಅಡಿಕೆ ಮರಗಳು ಕೊಳೆ ರೋಗಕ್ಕೆ ತುತ್ತಾಗುತ್ತಿವೆ. ಇಲ್ಲಿ ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು. ಸಂಬಂಧಪಟ್ಟವರು ಶೀಘ್ರವೇ ಎಚ್ಚೆತ್ತುಕೊಂಡು ಈ ಸಮಸ್ಯೆಯನ್ನು ಬಗೆಹರಿಸಿ ಈ ಭಾಗದ ಕೃಷಿಕರನ್ನು ಸಂಕಷ್ಟದಿಂದ ಪಾರು ಮಾಡಬೇಕಾಗಿದೆ ಎಂದು ಸಂಜೀವ ಪೂಜಾರಿ ಕೊಡಂಗೆ ತಿಳಿಸಿದರು.

Related posts

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

Suddi Udaya

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

Suddi Udaya

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಜೆ ಇ ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅಮೋಘ ಸಾಧನೆ : 202 ವಿದ್ಯಾರ್ಥಿಗಳು ಅರ್ಹತೆ : ಮೋಹಿತ್. ಎಂ ದೇಶಕ್ಕೆ 29ನೇ ರ್‍ಯಾಂಕ್

Suddi Udaya

ಅರುವ ಯಕ್ಷಗಾನ ತರಬೇತಿ ಕೇಂದ್ರ ಅಳದಂಗಡಿ

Suddi Udaya
error: Content is protected !!