July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

ಬೆಳ್ತಂಗಡಿ: ದುಬೈ ಮೂಲದ ಆಲ್ ಜಬೇರ್ ಕಂಪನಿಯಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉಜಿರೆ ಮೂಲದ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರವರಿಂದ ಹಂತ ಹಂತವಾಗಿ ಹಣವನ್ನು ಖಾತೆಗೆ ವರ್ಗಾಯಿಸಿಕೊಂಡ ಘಟನೆ ಜು.31 ರಂದು ನಡೆದಿದೆ.

ಉಜಿರೆ ಮಂಜುಶ್ರೀ ನಗರ ನಿವಾಸಿ ಕೊನ್ಸಟೆನಿ ಅಲ್ಪೋನ್ಸ್‌ ಕರ್ಡೋಜ್ (64 ವರ್ಷ)ಎಂಬವರು ಈ ಹಿಂದೆ ವಿದೇಶದಲ್ಲಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದವರು, ಕಳೆದ 4.5 ವರ್ಷದಿಂದ ಊರಿನಲ್ಲಿಯೇ ಇದ್ದವರು ಫೇಸ್ಬುಕ್ ಜಾಲತಾಣದ ಲಿಂಕ್ ಮುಖಾಂತರ ದುಬೈ ಮೂಲದ ಆಲ್ ಜಬೇರ್ (al jaber) ಕಂಪನಿಯಲ್ಲಿ ಉತ್ತಮ ಸಂಬಳದ ಉದ್ಯೋಗದ ಭರವಸೆ ಇರುವುದನ್ನು ಸತ್ಯ ಎಂದು ನಂಬಿ, ಲಿಂಕ್ ಮೂಲಕ ಅಪರಿಚಿತ ಕಂಪನಿಯ HRA ಅಧಿಕಾರಿ ಎಂದು ನಂಬಿಸಿ, ನಂತರ ಪಿರ್ಯಾದುದಾರರು ಆತನ ಮೊಬೈಲ್ ನಂಬ್ರ ಪಡೆದುಕೊಂಡು, ಆತನೊಂದಿಗೆ ವಾಟ್ಸಾಪ್ ಮೂಲಕ ಸಂವಹನ ಬೆಳೆಸಿದಾಗ ಪ್ರಾರಂಭಿಕ ಖರ್ಚು ಎಂದು ಅಲ್ಪೋನ್ಸ್‌ ಕರ್ಡೋಜ್ ನಂಬಿಸಿ ಅಲ್ಪೋನ್ಸ್‌ ಕರ್ಡೋಜ್ ರಿಂದ ಅಪರಿಚಿತನ ಬ್ಯಾಂಕ್ ಖಾತೆಗೆ ಜು. 24 ರಿಂದ ಜು.31 ರವರೆಗೆ ಹಂತ ಹಂತವಾಗಿ ರೂ. 2,72,621/- ಮೊತ್ತ ನಗದನ್ನು ಆತನ ಖಾತೆಗೆ ವರ್ಗಾಯಿಸಿಕೊಂಡು, ಇನ್ನಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅಲ್ಪೋನ್ಸ್‌ ಕರ್ಡೋಜ್ ಮೋಸ ಹೋಗಿರುವ ಬಗ್ಗೆ ತಿಳಿದು, ನಂಬಿಸಿ ಮೋಸ ಮಾಡಿದ ಅಪರಿಚಿತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೀಡಿದ ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ. 77/2024 ಕಲಂ: 318(2), 318(4) ಭಾರತೀಯ ನ್ಯಾಯ ಸಂಹಿತೆ ಮತ್ತು 67(D) IT act ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್‌ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯುಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya

ಏ.15-25: ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!