September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

ಬೆಳ್ತಂಗಡಿ: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಗೆ ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸದೆ, ಕರ್ತವ್ಯ ಲೋಪ ಮಾಡಿರುವ ಮರೋಡಿ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.1 ರಂದು ಅಮಾನತುಗೊಳಿಸುವುದಾಗಿ ತಿಳಿಸಿದ್ದಾರೆ.

ಮರೋಡಿ ಗ್ರಾ.ಪಂ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದ ಸಂದರ್ಭದಲ್ಲಿ ಮರೋಡಿ ಗ್ರಾ.ಪಂ ಅಧ್ಯಕ್ಷ ರತ್ನಾಕರ ಬುಣ್ಣನ್ ಗ್ರಾಮ ಲೆಕ್ಕಾಧಿಕಾರಿಯ ಕರ್ತವ್ಯ ಲೋಪದ ಬಗ್ಗೆ ವಿವರಿಸಿದ್ದು ತಕ್ಷಣ ಜಿಲ್ಲಾಧಿಕಾರಿ ಅಮಾನುತುಗೊಳಿಸಲು ತಹಶೀಲ್ದಾರರಿಗೆ ಸೂಚಿಸಿದರು.

ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಕಂದಾಯ ಇಲಾಖೆಗೆ ಸಂಭಂಧಿಸಿದ ಕೆಲಸವನ್ನು ಸರಿಯಾಗಿ ಮಾಡಿಕೊಡುತ್ತಿರಲಿಲ್ಲ. ಯಾವುದೇ ಮಾಹಿತಿಯನ್ನು ತಿಳಿಸುತ್ತಿರಲಿಲ್ಲ. ಮಳೆ ಹಾನಿಯಾದ ಪ್ರದೇಶಕ್ಕೂ ಮಳೆ ಹಾನಿಯಿಂದ ಸಮಸ್ಯೆ ಆದರೂ ಭೇಟಿ ನೀಡಲಿಲ್ಲ ಎಂದು ಅಧ್ಯಕ್ಷರು ಸಹಿತ ಗ್ರಾಮಸ್ಥರು ಆರೋಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಕರಣಿಕ ಶಿವಕುಮಾರ್ ಅವರನ್ನು ವಿಚಾರಿಸಿದಾಗ ಗ್ರಾಮಕರಣಿಕ ಸಮಪ೯ಕ ಉತ್ತರ ನೀಡದಿರುವುದರಿಂದ ಅವರನ್ನು ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಧ್ಯಮ ಗಳಿಗೆ ತಿಳಿಸಿದರು.

Related posts

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಅಭಿ ಅರಿಗಾ ನೇಮಕ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya
error: Content is protected !!