ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಬಳಂಜ: ಅಟ್ಲಾಜೆ – ಬದಿನಡೆ (ಕೊಂಗುಲ)- ಪೊಯ್ಯಗುಡ್ಡೆ ರಸ್ತೆಯು ಮಣ್ಣಿನಿಂದ ಸಂಪೂರ್ಣ ಹದಗೆಟ್ಟು ಯಾವುದೇ ವಾಹನಗಳು ಹೋಗದ ರೀತಿಯಲ್ಲಿ ಹಾಗೂ ಸಾರ್ವಜನಿಕರು ನಡೆದಾಡಲು ಆಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬದಿನಡೆ – ಪೊಯ್ಯಗುಡ್ಡೆ ಸಂಪರ್ಕ ರಸ್ತೆಯ ಸೇತುವೆ ಬಳಿ ರಸ್ತೆಯ ಮಣ್ಣು ಕುಸಿದಿದ್ದು ಸಂಪರ್ಕ ವ್ಯವಸ್ಥೆಯು ಕುಡಿದು ಹೋಗಿರುವುದರಿಂದ ಸಾರ್ವಜನಿಕರು ಯಾವುದೇ ಕಡೆಯಿಂದಲೂ ತಮ್ಮ ತಮ್ಮ ಕೆಲಸಗಳಿಗೆ ಹಾಗೂ ಹಲವಾರು ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ಹೋಗಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಭಂಧ ಪಟ್ಟ ಇಲಾಖೆಯವರು ಪಂಚಾಯತ್ ನವರು ಶೀಘ್ರವಾಗಿ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ನೀಡಬೇಕಾಗಿ ಕೊಂಗುಳ ಬದಿನಡೆ ಕ್ಷೇತ್ರದ ಧರ್ಮದರ್ಶಿ ಜಯ ಸಾಲಿಯಾನ್ ಒತ್ತಾಯಿಸಿದ್ದಾರೆ.

Leave a Comment

error: Content is protected !!