September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

ಬಳಂಜ: ಅಟ್ಲಾಜೆ – ಬದಿನಡೆ (ಕೊಂಗುಲ)- ಪೊಯ್ಯಗುಡ್ಡೆ ರಸ್ತೆಯು ಮಣ್ಣಿನಿಂದ ಸಂಪೂರ್ಣ ಹದಗೆಟ್ಟು ಯಾವುದೇ ವಾಹನಗಳು ಹೋಗದ ರೀತಿಯಲ್ಲಿ ಹಾಗೂ ಸಾರ್ವಜನಿಕರು ನಡೆದಾಡಲು ಆಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬದಿನಡೆ – ಪೊಯ್ಯಗುಡ್ಡೆ ಸಂಪರ್ಕ ರಸ್ತೆಯ ಸೇತುವೆ ಬಳಿ ರಸ್ತೆಯ ಮಣ್ಣು ಕುಸಿದಿದ್ದು ಸಂಪರ್ಕ ವ್ಯವಸ್ಥೆಯು ಕುಡಿದು ಹೋಗಿರುವುದರಿಂದ ಸಾರ್ವಜನಿಕರು ಯಾವುದೇ ಕಡೆಯಿಂದಲೂ ತಮ್ಮ ತಮ್ಮ ಕೆಲಸಗಳಿಗೆ ಹಾಗೂ ಹಲವಾರು ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ಹೋಗಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಭಂಧ ಪಟ್ಟ ಇಲಾಖೆಯವರು ಪಂಚಾಯತ್ ನವರು ಶೀಘ್ರವಾಗಿ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ನೀಡಬೇಕಾಗಿ ಕೊಂಗುಳ ಬದಿನಡೆ ಕ್ಷೇತ್ರದ ಧರ್ಮದರ್ಶಿ ಜಯ ಸಾಲಿಯಾನ್ ಒತ್ತಾಯಿಸಿದ್ದಾರೆ.

Related posts

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya
error: Content is protected !!