25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರೋಡಿ ಮತ್ತು ಪೆರಾಡಿ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ಎಲ್ಲೆಡೆ ಎಡಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಭೂಕುಸಿತ, ಮರಗಳು ಧರೆಗೆ ಉರುಳಿದ್ದು, ರಸ್ತೆಗಳಿಗೆ ಹಾನಿ, ಕೃಷಿ ನಾಶದಂತಹ ಅನಾಹುತಗಳು ಸಂಭವಿಸಿವೆ.

ಮರೋಡಿ ಗ್ರಾಮದ ಶಾಂತಿ ನಗರದಿಂದ ದೇರಾಜೆ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಸೇತುವೆ ಕೊಚ್ಚಿ ಹೋಗಿ ಸಂಪರ್ಕ ಕಡಿತ, ಕಾಯೇರುಬೈಲು ರಸ್ತೆಯ ರಾಗಿಮೇಲು ಎಂಬಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.

ಪಾಣಾಲು ಸೇತುವೆಗೆ ಹಾನಿ, ಕೋಂಟಡ್ಕ ಎಂಬಲ್ಲಿ ಮೋರಿ ಕುಸಿತ, ಉಳಗುಡ್ಡೆ ಎಂಬಲ್ಲಿ ಮರಬಿದ್ದು ವಿದ್ಯುತ್ ಲೈನಿಗೆ ಹಾನಿ, ಕಲ್ಲಟ್ಟ ಎಂಬಲ್ಲಿ ಕಾಲುಸಂಖ ಕೊಚ್ಚಿ ಹೋಗಿ ಸಂಪರ್ಕ ಕಡಿತ, ಪೆರಾಡಿ ಗ್ರಾಮದ ಬೀರೊಟ್ಟು ಎಂಬಲ್ಲಿ ರಸ್ತೆಯ ತಡೆಗೋಡೆ ಕೊಚ್ಚಿ ಹೋಗಿದ್ದು, ನೆಲ್ಲಿಂಗೇರಿ ಕ್ರಾಸ್ ಬಳಿ ರಸ್ತೆ ಸಂಚಾರಕ್ಕೆ ಅಡಚಣೆಯಂತಹ ಪ್ರದೇಶಗಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾಕರ್ ಬುಣ್ಣಾನ್, ಪಿಡಿಒ ಆಶಾಲತಾ ಎಚ್, ಸದಸ್ಯರಾದ ಪದ್ಮಶ್ರೀ ಜೈನ್, ಅಶೋಕ ಪೂಜಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಂಡರು.

Related posts

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ

Suddi Udaya

ವೇಣೂರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ವಿಮ್ ನಿಯೋಗ

Suddi Udaya
error: Content is protected !!