23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

ಮುಂಡಾಜೆ ಗ್ರಾಮದ ಸೋಮಂತಡ್ಕ ಮಜಲು ರಸ್ತೆ ನಡೆದು ಹೋಗಲು ಅಸಾಧ್ಯವಾದ ರಸ್ತೆಯಾಗಿ ಪರಿಣಮಿಸಿದೆ.

ಆ.1 ರಂದು ವಾಹನಗಳು ಈ ರಸ್ತೆಯಲ್ಲಿ ಸಿಲುಕಿಕೊಂಡು ಸಾರ್ವಜನಿಕರ ಸಹಕಾರದಿಂದ ಮೇಲೆತ್ತಲಾಯಿತು. ನಂತರ ಗ್ರಾಮ ಪಂಚಾಯತ್ ಸದಸ್ಯೆ ದಿಶಾ ದಿನೇಶ ಪಟವರ್ಧನ್ ಅವರ ನೇತೃತ್ವದಲ್ಲಿ ಸ್ಥಳೀಯರು ಸೇರಿ ಎರಡು ಲೋಡು ಚರಲು ಹಾಕಲಾಯಿತು.

ರಸ್ತೆಯ ಇಕ್ಕಲಗಳಲ್ಲಿ ಕಾಲುವೆಗಳು ಕಸದಿಂದ ತುಂಬಿದ್ದು, ಏಪ್ರಿಲ್ -ಮೇ ತಿಂಗಳಲ್ಲಿ ಗ್ರಾಮ ಪಂಚಾಯತ್ ಸರಿಯಾದ ಕಾಮಗಾರಿ ನಡೆಸದೆ ಇದ್ದುದರಿಂದ ಈ ರೀತಿಯಾಗಿದೆ ಎಂದು ಸ್ಥಳೀಯರು ದೂರಿಕೊಂಡಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ರಬ್ಬರ್ ತೋಟಗಳಿದ್ದು ಮರದ ಗೆಲ್ಲುಗಳು ರಸ್ತೆಗೆ ಬಿದ್ದು ರಸ್ತೆ ಸಂಪೂರ್ಣ ಹಾಳಾಗಿದೆ.

ಸುಮಾರು 20 ವರ್ಷಗಳ ಹಿಂದೆ ಈ ರಸ್ತೆಗೆ ಡಾಮರೀಕರಣವಾಗಿದ್ದು ನಂತರ ಯಾವುದೇ ಕಾಮಗಾರಿ ನಡೆದಿಲ್ಲ. ಮಳೆಗಾಲದಲ್ಲಿ ಬಿಡಿ, ಬೇಸಿಗೆಯಲ್ಲೂ ನಡೆದು ಹೋಗಲು ಕಷ್ಟವಾಗುತ್ತಿದ್ದು, ನೂರಾರು ವಿದ್ಯಾರ್ಥಿಗಳು ಇದೇ ರಸ್ತೆಯಲ್ಲಿ ಶಾಲೆಗೆ ನಡೆದು ಬರುತ್ತಿದ್ದಾರೆ. ಮುಂಡಾಜೆ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಮುಖ್ಯ ರಸ್ತೆಯಾಗಿ ಇರುವ ಈ ದಾರಿ ಸರಿಯಾಗಲು ಇನ್ನೆಷ್ಟು ಸಮಯ ಕಾಯಬೇಕೋ ಎಂದು ಸ್ಥಳೀಯರು ಹಿಡಿ ಶಾಪ ಹಾಕುತ್ತಿದ್ದಾರೆ.

ಈ ಹಿಂದೆ ಹಲವಾರು ಬಾರಿ ಮಜಲು ವಾಳ್ಯದ ಮಂದಿ ಶ್ರಮದಾನದ ಮೂಲಕ ಈ ರಸ್ತೆಯ ಕಲ್ಲು ಹೆಕ್ಕುವ, ಕಾಲುವೆಯನ್ನು ದುರಸ್ತಿಗೊಳಿಸುವ ಕಾರ್ಯ ಮಾಡಿದ್ದರು. ಈ ವರ್ಷದ ಮಳೆಗೆ ಎಲ್ಲವೂ ಕೊಚ್ಚಿ ಹೋಗಿದೆ. ಈ ಮಳೆಗಾಲವಂತು ಈ ರಸ್ತೆಗೆ ದ್ವಿಚಕ್ರ ವಾಹನವೂ ಸೇರಿದಂತೆ ಯಾವುದೇ ವಾಹನ ಸಂಚಾರ ಅಸಾಧ್ಯದ ಮಾತು. ಮುಂದಿನ ದಿನಗಳಲ್ಲಾದರೂ ಕಾಂಕ್ರೀಟೀಕರಣವಾಗಲಿ ಎನ್ನುವುದು ಸ್ಥಳೀಯರ ಆಶಯ. ಈ ಪ್ರದೇಶದ ಮತದಾರರು ಮತದಾನ ಬಹಿಷ್ಕರಿಸುವ ಬೆದರಿಕೆ ಹಾಕಿದ್ದರು. ಆಗ ರಾಜಕಾರಣಿಗಳು ಸರಿಪಡಿಸುವ ಆಶ್ವಾಸನೆ ನೀಡಿದ್ದರು. ಆದರೆ ನಂತರ ಎಲ್ಲರೂ ಮರೆತು ಹೋಗಿದೆ.
ಆದಷ್ಟು ಬೇಗ ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತಾಗಲಿ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Related posts

ಭಾರೀ ಮಳೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya
error: Content is protected !!