30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ಡಿಕ್ಕಿ ಯಾಗಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಇತ್ತೀಚೆಗೆ ವರದಿಯಾಗಿದೆ.

ಬೆಳ್ತಂಗಡಿ ಉಮೇಶ್ ಗೌಡ (41 ವರ್ಷ), ರವರ ದೂರಿನಂತೆ ಜು.31 ರಂದು ಮಧ್ಯಾಹ್ನ, ಅವರ ದ್ವಿಚಕ್ರ ವಾಹನದಲ್ಲಿ ಅವರ ಹೆಂಡತಿ ವಿನೋದರವರನ್ನು ಸಹಸವಾರಳನ್ನಾಗಿ ಕುಳ್ಳಿರಿಸಿಕೊಂಡು, ಬೆಳ್ತಂಗಡಿಯಿಂದ ಬಂದಾರು ಕಡೆಗೆ ತೆರಳುತ್ತಾ, ಕೊಯ್ಯುರು ಗ್ರಾಮದ ಮಲೆಬೆಟ್ಟು ಎಂಬಲ್ಲಿಗೆ ತಲುಪುತ್ತಿದ್ದಂತೆ, ಉಮೇಶ್ ಗೌಡರವರು ಮುಂದಿನಿಂದ ಹೋಗುತ್ತಿದ್ದ ಆಟೋರಿಕ್ಷಾವನ್ನು ಅದರ ಚಾಲಕ ಸೋಮಶೇಖರ್ ರವರು, ದುಡುಕುತನದಿಂದ ಚಲಾಯಿಸಿ ಆಟೋರಿಕ್ಷಾ ಉಮೇಶ್ ಗೌಡ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿರುತ್ತದೆ.

ಪರಿಣಾಮ ದ್ವಿಚಕ್ರ ಸವಾರರು ವಾಹನ ಸಮೇತ ಇಬ್ಬರು ರಸ್ತೆಗೆ ಬಿದ್ದು ಉಮೇಶ್ ಗೌಡರವರು ಗಾಯಗೊಂಡಿದ್ದು, ಅವರ ಹೆಂಡತಿಗೆ ಯಾವುದೇ ರೀತಿಯ ಗಾಯಗಳಾಗಿರುವುದಿಲ್ಲ. ಉಮೇಶ್ ಗೌಡ ಉಜಿರೆಯ ಎಸ್ ಡಿ ಎಮ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಮನೆಗೆ ತೆರಳಿದವರು, ನಂತರ ಗಾಯ ಉಲ್ಬಣಗೊಂಡು ಗುರುವಾಯನಕೆರೆಯ ಅಭಯ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 82/2024 ಕಲಂ: 281, 125(a), BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಧಾಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya
error: Content is protected !!