September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ಡಿಕ್ಕಿ ಯಾಗಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಇತ್ತೀಚೆಗೆ ವರದಿಯಾಗಿದೆ.

ಬೆಳ್ತಂಗಡಿ ಉಮೇಶ್ ಗೌಡ (41 ವರ್ಷ), ರವರ ದೂರಿನಂತೆ ಜು.31 ರಂದು ಮಧ್ಯಾಹ್ನ, ಅವರ ದ್ವಿಚಕ್ರ ವಾಹನದಲ್ಲಿ ಅವರ ಹೆಂಡತಿ ವಿನೋದರವರನ್ನು ಸಹಸವಾರಳನ್ನಾಗಿ ಕುಳ್ಳಿರಿಸಿಕೊಂಡು, ಬೆಳ್ತಂಗಡಿಯಿಂದ ಬಂದಾರು ಕಡೆಗೆ ತೆರಳುತ್ತಾ, ಕೊಯ್ಯುರು ಗ್ರಾಮದ ಮಲೆಬೆಟ್ಟು ಎಂಬಲ್ಲಿಗೆ ತಲುಪುತ್ತಿದ್ದಂತೆ, ಉಮೇಶ್ ಗೌಡರವರು ಮುಂದಿನಿಂದ ಹೋಗುತ್ತಿದ್ದ ಆಟೋರಿಕ್ಷಾವನ್ನು ಅದರ ಚಾಲಕ ಸೋಮಶೇಖರ್ ರವರು, ದುಡುಕುತನದಿಂದ ಚಲಾಯಿಸಿ ಆಟೋರಿಕ್ಷಾ ಉಮೇಶ್ ಗೌಡ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿರುತ್ತದೆ.

ಪರಿಣಾಮ ದ್ವಿಚಕ್ರ ಸವಾರರು ವಾಹನ ಸಮೇತ ಇಬ್ಬರು ರಸ್ತೆಗೆ ಬಿದ್ದು ಉಮೇಶ್ ಗೌಡರವರು ಗಾಯಗೊಂಡಿದ್ದು, ಅವರ ಹೆಂಡತಿಗೆ ಯಾವುದೇ ರೀತಿಯ ಗಾಯಗಳಾಗಿರುವುದಿಲ್ಲ. ಉಮೇಶ್ ಗೌಡ ಉಜಿರೆಯ ಎಸ್ ಡಿ ಎಮ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಮನೆಗೆ ತೆರಳಿದವರು, ನಂತರ ಗಾಯ ಉಲ್ಬಣಗೊಂಡು ಗುರುವಾಯನಕೆರೆಯ ಅಭಯ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 82/2024 ಕಲಂ: 281, 125(a), BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಕುಮಾರ್ ಜೈನ್ ರಿಗೆ ಅಭಿನಂದನೆ

Suddi Udaya

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya
error: Content is protected !!