July 23, 2026
Uncategorized

ತೋಟತ್ತಾಡಿ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಆಗದೆ ತಂದೊಡ್ಡಿದೆ ಸಮಸ್ಯೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡ ಸ್ಥಳಕ್ಕೆ: ಗೇಟ್ ತೆರೆಯಲು ಯಶಸ್ವಿ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮಪಂಚಾಯತು ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಸ್ಥಳೀಯರು ನಡೆಸಿದ ಪ್ರಯತ್ನಗಳು ವಿಫಲವಾಗಿದ್ದು , ಮುಳುಗು ತಜ್ಞ ಈಶ್ವರ ಮಲ್ಪೆ ಅವರು ತಂಡ ಆಗಮಿಸಿ ಗೇಟ್ ತೆರೆಯಲು ಯಶಸ್ವಿಯಾಗಿದ್ದಾರೆ.

ಅರಣ್ಯ ಭಾಗದಲ್ಲಿ ಸುಮಾರು 27 ಎಕರೆ ಪ್ರದೇಶದಲ್ಲಿವ್ಯಾಪಿಸಿಕೊಂಡಿರುವ ಈ ಕೆರೆ ಗ್ರಾಮದ ಸುಮಾರು 300ಕ್ಕಿಂತ ಅಧಿಕ ಕುಟುಂಬಗಳಿಗೆ ಬೇಸಿಗೆಯ ಕೃಷಿ ನೀರಿಗೆ ಆಧಾರವಾಗಿದೆ.

ಈ ಬಾರಿ ಮಳೆಗೆ ಕೆರೆಯು ಸಂಪೂರ್ಣ ತುಂಬಿದೆ. ಕೆರೆ ನೀರು ಹೊರ ಬಿಡಲು ಅಳವಡಿಸಲಾದ ಗೇಟು ಮುಚ್ಚಿದ್ದು ಅದನ್ನು ತೆರೆಯಲು ಪಂಚಾಯಿತಿ ಮತ್ತು ಸ್ಥಳೀಯರು ಸಾಕಷ್ಟು ಪ್ರಯತ್ನಿಸಿದ್ದು ಕೆರೆಯಲ್ಲಿ ಹೆಚ್ಚಿನ ನೀರು ತುಂಬಿರುವ ಕಾರಣ ಸಾಧ್ಯವಾಗಿಲ್ಲ. ಗೇಟು ತೆರೆದರೆ ಮಾತ್ರ ನೀರು ಸ್ಥಳೀಯ ತೋಡಿಗೆ ಹರಿದು ಕೆರೆಯಲ್ಲಿ ನೀರಿನ ಮಟ್ಟ ಹಾಗೂ ನೀರಿನ ಒತ್ತಡ ಕಡಿಮೆಯಾಗುತ್ತದೆ. ನೀರನ್ನು ಹೀಗೆ ಬಿಟ್ಟರೆ ಕೆರೆದಂಡೆ ಒಡೆಯುವ ಸಾಧ್ಯತೆಯಿದೆ. ಕೆರೆ ದಂಡೆ ಒಡೆದರೆ ಕರುನಾಳೆ ಪರಿಸರದ 30 ಕುಟುಂಬಗಳ ಸಮೇತ ನೆಲ್ಲಿಗುಡ್ಡೆ, ಕಂಚಾರಿ ಕಂಡ,ಬೇಂದ್ರಾಳ ಮೊದಲಾದ ಪ್ರದೇಶಗಳ ಜನರಿಗೆ ತೀವ್ರ ಸಮಸ್ಯೆ ಹಾಗೂಅಪಾಯವು ಉಂಟಾಗುವ ಸಾಧ್ಯತೆ ಇತ್ತು.ಇದೀಗ ಗೇಟ್‌ ತೆಗೆಯುವ ನಿಟ್ಟಿನಲ್ಲಿ ಅಗ್ನಿಶಾಮಕ ದಳದವರು ಸ್ಥಳದಲ್ಲಿದ್ದು ಪ್ರಯತ್ನ ನಡೆಸಿದ್ದರೆ.

ಕೆರೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ತುಂಬಿದ್ದು ಮುಳುಗು ತಜ್ಞರಿಂದ ಮಾತ್ರ ಗೇಟ್‌ ತೆಗೆಯಲು ಸಾಧ್ಯವಾಗುತ್ತದೆ. ಇದಕ್ಕಾಗಿ ಖ್ಯಾತ ಮುಳುಗು ತಜ್ಞ ಈಶ್ವ‌ರ್ ಮಲ್ಪೆ ಅವರ ತಂಡ ಸ್ಥಳಕ್ಕೆ ಆಗಮಿಸಿ ಗೇಟ್ ತೆರವು ಗೊಳಿಸಿದ್ದಾರೆ. ಕೆ.ಪಿ.ಸಿ.ಸಿ ಸದಸ್ಯ ರಕ್ಷಿತ್ ಶಿವರಾಂ ಗ್ರಾಮ ಚಾಯತಿನ ಅಧ್ಯಕ್ಷ ಶಾರದಾ ಮತ್ತು ಪಿಡಿಒ ಪುರುಷೋತ್ತಮ್ಸದಸ್ಯರು,ಅಧಿಕಾರಿಗಳು, ಜನಪ್ರತಿನಿಧಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದರು.

Related posts

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಸಾವಿರಾರು ಭಜಕರಿಂದ ಅಳದಂಗಡಿ ಅರಮನೆ ನಗರಿಯಲ್ಲಿ ಭಕ್ತಿಯ ಅಲೆ ಎಬ್ಬಿಸಿದ ಕುಣಿತಾ ಭಜನೆ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

Suddi Udaya

ಮಿತ್ತಬಾಗಿಲು ಕೊಪ್ಪದಗುಂಡಿ ಕಿಂಡಿ ಅಣೆಕಟ್ಟು ಮುಳುಗಡೆ:ಬೈಕ್ ಸಹಿತ ನೀರು ಪಾಲಾದ ವ್ಯಕ್ತಿ ಅಪಾಯದಿಂದ ಪಾರು

Suddi Udaya
error: Content is protected !!