July 23, 2026
Uncategorized

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ ಸಂಭವಿಸಿದ್ದು ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಹಾಗೂ ಸಮರೋಪಾದಿಯಲ್ಲಿ ಕೈಗೊಳ್ಳುವುದರ ಜೊತೆಗೆ ಕೂಡಲೇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ ಸಂಭವಿಸಿದ್ದು ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಹಾಗೂ ಸಮರೋಪಾದಿಯಲ್ಲಿ ಕೈಗೊಳ್ಳುವುದರ ಜೊತೆಗೆ ಕೂಡಲೇ ಸೂಕ್ತ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ, ಕಂದಾಯ ಸಚಿವರಾದ ಕೃಷ್ಣೇಬೈರೇಗೌಡ, ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಇತಿಹಾಸ ಕಂಡರಿಯದ ದೊಡ್ಡ ಮಟ್ಟದ ಪ್ರವಾಹ ಉಂಟಾಗಿ, ಇಡೀ ಜಿಲ್ಲೆಯ ಜನಜೀವನವೇ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದ್ದು ಊಹಿಸಲೂ ಸಾಧ್ಯವಾಗದ ರೀತಿಯಲ್ಲಿ ಅತ್ಯಂತ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಬೇಕಾಗಿ ಬಂದಿದೆ.


ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ದೊಡ್ಡ ಪ್ರಮಾಣದ ಗುಡ್ಡ ಕುಸಿತ ಹಾಗೂ ಭೂಕುಸಿತ ಸಂಭವಿಸಿ, ಬಹುತೇಕ ಕಡೆ ರಸ್ತೆ ಸಂಪರ್ಕಗಳು ಸಂಪೂರ್ಣವಾಗಿ ಕಡಿತಗೊಂಡಿವೆ. ಜಿಲ್ಲೆಯಲ್ಲಿನ ಬಹುತೇಕ ಹೆದ್ದಾರಿಗಳು ನದಿಯಂತಾಗಿದ್ದು, ಇಡೀ ಜಿಲ್ಲೆಯಲ್ಲಿ ಭೂಮಾರ್ಗ ಸಂಚಾರವೇ ಅಪಾಯಕ್ಕೆ ಸಿಲುಕಿದೆ. ಹಲವಾರು ಮನೆಗಳು ಕುಸಿತದಿಂದ ಹಾನಿಗೊಂಡಿದ್ದು, ಸಾವಿರಾರು ಜನರು ನಿರ್ವಸಿತರಾಗಿದ್ದಾರೆ. ಅನೇಕ ಕಡೆಗಳಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಹಲವಾರು ಗ್ರಾಮಗಳು ಮುಳುಗಡೆಯಾಗಿದ್ದು ಸಂಕಷ್ಟಕ್ಕೆ ಒಳಗಾಗಿರುವ ಕುಟುಂಬಗಳನ್ನು ಸ್ಥಳಾಂತರ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಘಾಟಿ ಪರಿಸರದಲ್ಲಿ ಸಾಕಷ್ಟು ಅಪಾಯದ ಪರಿಸ್ಥಿತಿ ಇದ್ದು, ಘಾಟಿ ಪ್ರದೇಶದಲ್ಲಿ ಪ್ರಯಾಣಿಕರ ಪರದಾಟ ಹೇಳತೀರದು. ಜಿಲ್ಲೆಯಾದ್ಯಂತ ಹಲವಾರು ತೋಟಗಳು ಜಲಾವೃತಗೊಂಡಿದ್ದು ತೋಟಗಾರಿಕೆ ಹಾಗೂ ಇತರೇ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಇಡೀ ರೈತ ಸಮೂಹವೇ ಅತ್ಯಂತ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದೆ.

ಜಿಲ್ಲೆಯಲ್ಲಿ ಇಂದೆಂದೂ ಸಂಭವಿಸಿದ ಮಟ್ಟದಲ್ಲಿ ತೀವು ತರದ ಹಾನಿಯಾಗಿದ್ದು, ತತಕ್ಷಣವೇ ಸಂಕಷ್ಟಕ್ಕೀಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಪರಿಣಾಮಕಾರಿಯಾಗಿ ಹಾಗೂ ಸಮರೋಪಾದಿಯಲ್ಲಿ ಕೈಗೊಳ್ಳುವುದರ ಜೊತೆಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕಾಗಿ ಅವರು ಮನವಿ ಮೂಲಕ ಒತ್ತಾಯಿಸಿದರು.

Related posts

ಅರಣ್ಯ ಇಲಾಖೆಯಿಂದ ಪ್ರಗತಿ ಬಂಧು ತಂಡಗಳಿಗೆ ಗಿಡ ವಿತರಣೆ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು-ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆ

Suddi Udaya

ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ಅತ್ಯಾಧುನಿಕ ಸಿ-ಆರ್ಮ್ ಯಂತ್ರಕ್ಕೆ ಚಾಲನೆ

Suddi Udaya

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

Suddi Udaya

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya
error: Content is protected !!