July 23, 2026
Uncategorized

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾಣೆಯಾಗಿದ್ದಾರೆ ಅವರನ್ನು ಹುಡುಕಿ ಕೊಡಿ ಎಂದು ಫಲಕಗಳನ್ನು ಹಿಡಿದು
ಪ್ರತಿಭಟನೆ ನಡೆಸಿದರು.
ಇಂಟೆಕ್ ಅಧ್ಯಕ್ಷ ನವೀನ್ ಗೌಡ ಸವಣಾಲು ಮಾತನಾಡಿ,ಇಡೀ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆಯಿಂದಾಗಿ ಜನರು ಸಂಕಷ್ಟದಲ್ಲಿದ್ದರೂ ಶಾಸಕರು ಮಾತ್ರ ಬೆಂಗಳೂರಿನಲ್ಲಿ ಮಜಾ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಈ ಹಿಂದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಟಾರ್ಚ್ ಹಾಕಿ ಹುಡುಕಬೇಕು ಎಂದ ಶಾಸಕರನ್ನು ಈಗ ನೆರೆ ಸಂತ್ರಸ್ತರು ಟಾರ್ಚ್ ಹಾಕಿ ಹುಡುಕಬೇಕಾಗಿದೆ ಎಂದರು.

ಯುವ ಕಾಂಗ್ರೆಸ್ ಅಧ್ಯಕ್ಷ ಸುದರ್ಶನ ಶೆಟ್ಟಿ ಆರಂಬೋಡಿ ಮಾತನಾಡಿ ಕಳೆದ ಚುನಾವಣೆಯಲ್ಲಿ 1 ಲಕ್ಷ ಮತ ನೀಡಿದ ತಾಲೂಕಿನ ಜನರು ಸಂಕಷ್ಟದಲ್ಲಿರುವಾಗ ಶಾಸಕ ಹರೀಶ್ ಪೂಂಜಾ ಬೆಂಗಳೂರಿನಲ್ಲಿ ರೌಡಿಯೊಬ್ಬನ ಹಿತ ಕಾಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯ ಸದಸ್ಯ , ಕಳಿಯ ಗ್ರಾಮ ಪಂಚಾಯತ್ ಸದಸ್ಯ ಕರೀಂ ಗೇರುಕಟ್ಟೆ , ಕಾಂಗ್ರೆಸ್ ಪಕ್ಷದ ಮುಖಂಡರಾದ ದೇವಿಪ್ರಸಾದ್ ಶೆಟ್ಟಿ ಅಳದಂಗಡಿ , ಹನೀಪ್ ಉಜಿರೆ ಮಾತನಾಡಿದರು.

ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷೆ ವಂದನಾ ಭಂಡಾರಿ , ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸವಿತಾ ಕೊರಗ , ಎಸ್ಟಿ ಘಟಕದ ಅಧ್ಯಕ್ಷ ಜಯಾನಂದ ಪಿಲಿಕಲ , ಮಾಜಿ ತಾಲೂಕು ಪಂಚಾಯತ್ ಸದಸ್ಯ ಗೋಪಿನಾಥ್ ನಾಯಕ್ , ಮುಖಂಡರಾದ ರವೀಂದ್ರ ಬಿ ಅಮಿನ್ , ಸದಾನಂದ ನಾಲ್ಕೂರು , ಪ್ರಜ್ವಲ್ ಜೈನ್ ಅಳದಂಗಡಿ , ಅಶ್ವಿನ್ ಕುಮಾರ್ ಬಳೆಂಜ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya
error: Content is protected !!