July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

ಬೆಳ್ತಂಗಡಿ; ಖಾಝಿ ಕೂರತ್‌ ತಂಙಳ್ ಅಕಾಲಿಕ ನಿಧನದಿಂದ ತೆರವಾಗಿರುವ ಖಾಝಿ ಸ್ಥಾನಕ್ಕೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಖಮರುಲ್ ಉಲಮಾ ಕಾಂತಪುರಂ ಶೈಖ್ ಅಬೂಬಕ್ಕರ್ ಅಹಮದ್ (ಎ.ಪಿ ಉಸ್ತಾದ್) ಅವರನ್ನು ಖಾಝಿಯಾಗಿ ಸ್ವೀಕರಿಸುವ ಐತಿಹಾಸಿಕ ಸಮಾರಂಭದ ಬಗ್ಗೆ ಆ.2 ರಂದು ಬೆಳ್ತಂಗಡಿಯಲ್ಲಿ ಸಮುದಾಯ ಮುಖಂಡರ ಸಮಾಲೋಚನಾ ಸಭೆ ನಡೆಯಿತು.

ಖಾಝಿ ಬೈಅತ್ ಬಳಿಕ ಅವರ ಪರಮಾಧಿಕಾರದಂತೆ ಅವರಿಗೆ ಸಹಾಯಕರಾಗಿ ನೇಮಿಸುವ ವೇಳೆ ಸಯ್ಯಿದ್ ಕಾಜೂರು ತಂಙಳ್ ಅವರನ್ನು ಪರಿಗಣಿಸುವಂತೆ ಸೇರಿದ್ದ ಮುಖಂಡರು ಒಕ್ಕೊರಲ ಆಗ್ರಹ ವ್ಯಕ್ತಪಡಿಸಿದರು. ಈ ಬಗ್ಗೆ ಸಂಯುಕ್ತ ಜಮಾಅತ್ ಅಧ್ಯಕ್ಷರನ್ನು ಭೇಟಿ ಮಾಡುವುದು ಹಾಗೂ ಎ.ಪಿ ಉಸ್ತಾದ್ ಅವರನ್ನು ಭೇಟಿ ಮಾಡಲು ನಿಯೋಗ ರಚಿಸಲಾಯಿತು.
ಕಳೆದ ಇಷ್ಟೂ ವರ್ಷಗಳಲ್ಲಿ ಬೆಳ್ತಂಗಡಿ ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿಯಾಗಿ ಸೇವೆ ಸಲ್ಲಿಸಿದ ಸಾದಾತ್ ತಂಙಳ್ ಅವರ ಸೇವೆಯನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಸಭೆಯ ನಿರ್ಣಯದಂತೆ ಸಂಯುಕ್ತ ಜಮಾಅತ್ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಅವರನ್ನು ನಿಯೋಗ ಭೇಟಿ ಮಾಡಿ ಸಭೆಯ ಇಂಗಿತವನ್ನು ಹಾಗೂ ಬೇಡಿಕೆಗಳನ್ನು ಮುಂದಿಡಲಾಯಿತು.


ಸಭೆಯಲ್ಲಿ ಹಲವು ಮೊಹಲ್ಲಾಗಳ ಪ್ರಮುಖರು, ಸಂಯುಕ್ತ ಜಮಾಅತ್ ಪ್ರಮುಖರು ಹಾಗೂ ಸಮುದಾಯ ನಾಯಕರುಗಳು ಭಾಗವಹಿಸಿದ್ದರು.

Related posts

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಶಿಬಾಜೆ ಜನಸ್ಪಂದನ ಸಭೆ

Suddi Udaya

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!