23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

ಬೆಳ್ತಂಗಡಿ; ಖಾಝಿ ಕೂರತ್‌ ತಂಙಳ್ ಅಕಾಲಿಕ ನಿಧನದಿಂದ ತೆರವಾಗಿರುವ ಖಾಝಿ ಸ್ಥಾನಕ್ಕೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಖಮರುಲ್ ಉಲಮಾ ಕಾಂತಪುರಂ ಶೈಖ್ ಅಬೂಬಕ್ಕರ್ ಅಹಮದ್ (ಎ.ಪಿ ಉಸ್ತಾದ್) ಅವರನ್ನು ಖಾಝಿಯಾಗಿ ಸ್ವೀಕರಿಸುವ ಐತಿಹಾಸಿಕ ಸಮಾರಂಭದ ಬಗ್ಗೆ ಆ.2 ರಂದು ಬೆಳ್ತಂಗಡಿಯಲ್ಲಿ ಸಮುದಾಯ ಮುಖಂಡರ ಸಮಾಲೋಚನಾ ಸಭೆ ನಡೆಯಿತು.

ಖಾಝಿ ಬೈಅತ್ ಬಳಿಕ ಅವರ ಪರಮಾಧಿಕಾರದಂತೆ ಅವರಿಗೆ ಸಹಾಯಕರಾಗಿ ನೇಮಿಸುವ ವೇಳೆ ಸಯ್ಯಿದ್ ಕಾಜೂರು ತಂಙಳ್ ಅವರನ್ನು ಪರಿಗಣಿಸುವಂತೆ ಸೇರಿದ್ದ ಮುಖಂಡರು ಒಕ್ಕೊರಲ ಆಗ್ರಹ ವ್ಯಕ್ತಪಡಿಸಿದರು. ಈ ಬಗ್ಗೆ ಸಂಯುಕ್ತ ಜಮಾಅತ್ ಅಧ್ಯಕ್ಷರನ್ನು ಭೇಟಿ ಮಾಡುವುದು ಹಾಗೂ ಎ.ಪಿ ಉಸ್ತಾದ್ ಅವರನ್ನು ಭೇಟಿ ಮಾಡಲು ನಿಯೋಗ ರಚಿಸಲಾಯಿತು.
ಕಳೆದ ಇಷ್ಟೂ ವರ್ಷಗಳಲ್ಲಿ ಬೆಳ್ತಂಗಡಿ ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿಯಾಗಿ ಸೇವೆ ಸಲ್ಲಿಸಿದ ಸಾದಾತ್ ತಂಙಳ್ ಅವರ ಸೇವೆಯನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಸಭೆಯ ನಿರ್ಣಯದಂತೆ ಸಂಯುಕ್ತ ಜಮಾಅತ್ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಅವರನ್ನು ನಿಯೋಗ ಭೇಟಿ ಮಾಡಿ ಸಭೆಯ ಇಂಗಿತವನ್ನು ಹಾಗೂ ಬೇಡಿಕೆಗಳನ್ನು ಮುಂದಿಡಲಾಯಿತು.


ಸಭೆಯಲ್ಲಿ ಹಲವು ಮೊಹಲ್ಲಾಗಳ ಪ್ರಮುಖರು, ಸಂಯುಕ್ತ ಜಮಾಅತ್ ಪ್ರಮುಖರು ಹಾಗೂ ಸಮುದಾಯ ನಾಯಕರುಗಳು ಭಾಗವಹಿಸಿದ್ದರು.

Related posts

ಸರಕಾರಿ ಬಸ್ಸಿನಲ್ಲೇ ಹೃದಯಾಘಾತವಾಗಿ ಲಾಯಿಲದ ಇಲೆಕ್ಟ್ರೀಷಿಯನ್ ತಾಜ್ ಬಾವುಂಞಿ ನಿಧನ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಗರ್ಡಾಡಿ : ಹಳ್ಳಿಂಜ ಬೀಡು ನಿವಾಸಿ ಭವಾನಿ ನಿಧನ

Suddi Udaya

ಕೊಯ್ಯೂರು: ಬೈಕ್ ಮುಖಾಮುಖಿ ಡಿಕ್ಕಿ: ಶಾಲಾ ಶಿಕ್ಷಕನಿಗೆ ಗಂಭೀರ ಗಾಯ

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!